ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಂಸ ಮಾರುಕಟ್ಟೆ ಸ್ಥಳಾಂತರಿಸಲು ಆಗ್ರಹ

Last Updated 8 ಜನವರಿ 2021, 12:25 IST
ಅಕ್ಷರ ಗಾತ್ರ

ಬೆಳಗಾವಿ: ಪ್ರಾಣಿಗಳಿಗೂ ಆಂಬುಲೆನ್ಸ್‌ ಸೌಲಭ್ಯ ಕಲ್ಪಿಸುವುದು ಸೇರಿದಂತೆ 4 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರಿಗೆ ಇಲ್ಲಿ ಶುಕ್ರವಾರ ಸಲ್ಲಿಸಿದರು.

‘ನಗರದ ಮಧ್ಯದಲ್ಲಿರುವ ಗೋಮಾಂಸದ ಮಾರುಕಟ್ಟೆಯನ್ನು ನಗರದಿಂದ ಹೊರಗೆ ಸ್ಥಳಾಂತರಿಸಬೇಕು. ನಗರದಲ್ಲಿರುವ ಬಿಡಾಡಿ ನಾಯಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಬೆಳಗಾವಿಯಲ್ಲಿ ಪ್ರಾಣಿ ಹಿಂಸೆ ತಡೆ ಸಮಿತಿ ರಚಿಸಬೇಕು’ ಎಂದು ಒತ್ತಾಯಿಸಿದರು.

‘ಗೋಮಾಂಸ ಮಾರುಕಟ್ಟೆ ಜನನಿಬಿಡ ಪ್ರದೇಶದಲ್ಲಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಅದನ್ನು ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬೀದಿನಾಯಿಗಳ ಸಂಖ್ಯೆ ಅತಿಯಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳಿಗೆ ಪುನರ್ವಸತಿ ಕಲ್ಪಿಸಬೇಕು. ಈ ಕುರಿತು ಸಂಬಂಧಿಸಿದವರಿಗೆ ಸೂಚನೆ ನೀಡಬೇಕು’ ಎಂದು ಕೋರಿದರು.

‘ಜಿಲ್ಲೆಯಲ್ಲಿ ಪ್ರಾಣಿ ಹಿಂಸೆ ತಡೆ ಸಮಿತಿ ರಚಿಸುವಂತೆ ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ಹಲವು ಬಾರಿ ಕೋರಿದರೂ ಕ್ರಮ ಕೈಗೊಂಡಿಲ್ಲ. ತಕ್ಷಣ ಜಿಲ್ಲಾಧಿಕಾರಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT