ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಮತಗಟ್ಟೆಗಳಲ್ಲಿ ಗಮನಸೆಳೆದ ಸಿನಿತಾರೆಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮತಗಟ್ಟೆಗಳಲ್ಲಿ ಶನಿವಾರ ಸಿನಿಮಾ ತಾರೆಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಮತ ಚಲಾಯಿಸುವ ಮೂಲಕ ಗಮನ ಸೆಳೆದರು.

ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಿದರು.

ಸದಾಶಿವನಗರದ ಪೂರ್ಣಪ್ರಜ್ಞಾ ಶಿಕ್ಷಣ ಕೇಂದ್ರದಲ್ಲಿ ಮತ ಚಲಾಯಿಸಿದ ನಟ ಪುನೀತ್ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ವಿನಯ್ ರಾಜಕುಮಾರ್.

ಪದ್ಮನಾಭನಗರ ಕ್ಷೇತ್ರದಲ್ಲಿರುವ ಹೊಸಕೆರೆಹಳ್ಳಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದ ನಟ ಯಶ್

ಕತ್ರಿಗುಪ್ಪೆಯ ಸರ್ಕಾರಿ ಶಾಲೆಯೊಂದರಲ್ಲಿ ನಟ ದುನಿಯಾ ವಿಜಯ್ ಮತದಾನ ಮಾಡಿ, ಶಾಯಿ ಹಾಕಿಸಿಕೊಂಡ ಗುರುತು ತೋರಿಸಿದರು

ನಟ ರಮೇಶ್ ಅರವಿಂದ ಅವರು ಮೊದಲಬಾರಿ ಮತದಾನ ಮಾಡಿದ ಮಗಳು ನಿಹಾರಿಕಾ ರೊಂದಿಗೆ

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಲ್ಕೆರೆ ಮತಗಟ್ಟೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಜತೆಗೆ ಸ್ವಂತೀ ತೆಗೆಸಿಕೊಂಡ ಅಭಿಮಾನಿಗಳು

ಸದಾಶಿವನಗರದ ಪೂರ್ಣಪ್ರಜ್ಞಾ ಶಿಕ್ಷಣ ಕೇಂದ್ರದಲ್ಲಿ ಶನಿವಾರ ನಟ ತರುಣ್‌ ಮತ ಚಲಾಯಿಸಿದರು.

ವಿಜಯನಗರದಲ್ಲಿ ಹಿರಿಯ ಸಾಹಿತಿ ಎಂ.ಚಿದಾನಂದಮೂರ್ತಿ ಅವರು ಮತ ಚಲಾಯಿಸಿದರು.

ಕತ್ರಿಗುಪ್ಪೆಯಲ್ಲಿರುವ 'ಬಿಟಿಎಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' ಶಾಲೆಯಲ್ಲಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಮತ್ತು ಅವರ ಪತ್ನಿ ಸತ್ಯಭಾಮಾ ಕಂಬಾರ ಮತ ಹಾಕಿದರು -ಪ್ರಜಾವಾಣಿ ಚಿತ್ರಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT