<p><strong>ಬೆಳಗಾವಿ: </strong>ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಗರದ ಮಾಳಿ ಗಲ್ಲಿಯ ವಾರ್ಡ್ ನಂ.3ರ ಪ್ರಾಥಮಿಕ ಶಾಲೆಯ 3ನೇ ಬೂತ್ನಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.</p>.<p>‘ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ನಕಲಿ ಮತದಾನ ಮಾಡಿದ್ದಾರೆ’ ಎಂದು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಆರೋಪಿಸಿದರು. ಸಿಬ್ಬಂದಿ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಎಸಿಪಿ ಎನ್.ವಿ. ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಚರ್ಚಿಸಿದರು.</p>.<p>‘ನಕಲಿ ಮತದಾನ ನಡೆಯುವುದಕ್ಕೆ ಕಾರಣವಾದ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗುವುದು. ಕ್ರಮ ಕೈಗೊಳ್ಳದಿದ್ದಲ್ಲಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಲಾಗುವುದು’ ಎಂದು ಬೆನಕೆ ತಿಳಿಸಿದರು.</p>.<p class="Subhead"><strong>ಹೆಸರು ಮಾಯ: ಅಸಮಾಧಾನ</strong></p>.<p>ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದಕ್ಕೆ ಮತದಾರರು ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಜಂ ನಗರದಲ್ಲಿ ವಾರ್ಡ್ ನಂ.25ರಲ್ಲಿನ ನೂರಾರು ಮಂದಿಯ ಹೆಸರಿಗಳಿಲ್ಲ ಎಂದು ತಿಳಿಸಿದರು.</p>.<p>ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ವಾರ್ಡ್ ನಂ.11ರ ಮತಗಟ್ಟೆಯಲ್ಲಿ ಮತ ಹಾಕಿದ್ದೆವು. ಈಗ, ಸದಾಶಿವನಗರದ ಮತಗಟ್ಟೆಯಲ್ಲಿ ಹೆಸರು ಸೇರಿಸಲಾಗಿದೆ. ಈ ರೀತಿ ಬಹಳಷ್ಟು ಕಡೆ ಗೊಂದಲ ಉಂಟಾಗಿದೆ ಎಂದು ಕೆಲವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಗರದ ಮಾಳಿ ಗಲ್ಲಿಯ ವಾರ್ಡ್ ನಂ.3ರ ಪ್ರಾಥಮಿಕ ಶಾಲೆಯ 3ನೇ ಬೂತ್ನಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.</p>.<p>‘ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ನಕಲಿ ಮತದಾನ ಮಾಡಿದ್ದಾರೆ’ ಎಂದು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಆರೋಪಿಸಿದರು. ಸಿಬ್ಬಂದಿ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಎಸಿಪಿ ಎನ್.ವಿ. ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಚರ್ಚಿಸಿದರು.</p>.<p>‘ನಕಲಿ ಮತದಾನ ನಡೆಯುವುದಕ್ಕೆ ಕಾರಣವಾದ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗುವುದು. ಕ್ರಮ ಕೈಗೊಳ್ಳದಿದ್ದಲ್ಲಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಲಾಗುವುದು’ ಎಂದು ಬೆನಕೆ ತಿಳಿಸಿದರು.</p>.<p class="Subhead"><strong>ಹೆಸರು ಮಾಯ: ಅಸಮಾಧಾನ</strong></p>.<p>ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದಕ್ಕೆ ಮತದಾರರು ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಜಂ ನಗರದಲ್ಲಿ ವಾರ್ಡ್ ನಂ.25ರಲ್ಲಿನ ನೂರಾರು ಮಂದಿಯ ಹೆಸರಿಗಳಿಲ್ಲ ಎಂದು ತಿಳಿಸಿದರು.</p>.<p>ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ವಾರ್ಡ್ ನಂ.11ರ ಮತಗಟ್ಟೆಯಲ್ಲಿ ಮತ ಹಾಕಿದ್ದೆವು. ಈಗ, ಸದಾಶಿವನಗರದ ಮತಗಟ್ಟೆಯಲ್ಲಿ ಹೆಸರು ಸೇರಿಸಲಾಗಿದೆ. ಈ ರೀತಿ ಬಹಳಷ್ಟು ಕಡೆ ಗೊಂದಲ ಉಂಟಾಗಿದೆ ಎಂದು ಕೆಲವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>