ಶ್ರೀರಾಮ ನವಮಿ, ಶಿವರಾತ್ರಿ, ಶ್ರಾವಣ ಮಾಸ, ಅಮಾವಾಸ್ಯೆ, ಪ್ರತಿ ಸೋಮವಾರ ಸೇರಿದಂತೆ ವಿವಿಧ ಸಂದರ್ಭದಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಪೂಜೆ, ಅಭಿಷೇಕ ಸಲ್ಲಿಸಿ ದರ್ಶನ ಪಡೆಯುತ್ತಾರೆ. ಶ್ರಾವಣ ಮಾಸದ ಕೊನೆಯ ಸೋಮವಾರ ಜಾತ್ರೆ ನಡೆಯುತ್ತದೆ. ದೇವಸ್ಥಾನದ ಗರ್ಭಗುಡಿ ಶಿಥಿಲಗೊಂಡಿದ್ದು ಜೀರ್ಣೋದ್ಧಾರಕ್ಕೆ ಕಾದಿದೆ.