<p><strong>ಬೆಳಗಾವಿ: </strong>ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಬಂದೋಬಸ್ತ್ಗೆಸರ್ಕಾರದ ಆದೇಶದ ಮೇರೆಗೆ ತೆರಳಲಿರುವ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಪಡೆಯ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಜೊತೆಯಲ್ಲಿ ಒಯ್ಯುವುದಕ್ಕಾಗಿ ಕ್ರೀಡಾ ಪರಿಕರಗಳನ್ನು ಶುಕ್ರವಾರ ವಿತರಿಸಲಾಯಿತು.</p>.<p>ಇಲ್ಲಿನ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್, ಎಲ್ಲ ತುಕಡಿಗಳ ಸಿಬ್ಬಂದಿಗೆ ವಾಲಿಬಾಲ್ ನೆಟ್, ಫುಟ್ಬಾಲ್, ಚೆಸ್ ಮತ್ತು ಕೇರಂ ಬೋರ್ಡ್ಗಳನ್ನು ವಿತರಿಸಿದರು.</p>.<p>‘ಕೆಎಸ್ಆರ್ಪಿ ಎಡಿಜಿಪಿ ಅಲೋಕ್ಕುಮಾರ್ ನೇತೃತ್ವದಲ್ಲಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯದ ಚುನಾವಣೆ ಮತ್ತು ಕಾನೂನು ಸುವ್ಯವಸ್ಥೆಯ ಬಂದೋಬಸ್ತ್ ಕರ್ತವ್ಯದಲ್ಲಿದ್ದಾಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಸದೃಢವಾಗಿರಲೆಂಬ ದೃಷ್ಟಿಯಿಂದ ಕ್ರೀಡಾ ಪರಿಕರಗಳನ್ನು ವಿತರಿಸಲಾಗಿದೆ.</p>.<p>ಇದರಿಂದ ಅವರು ಚಟುವಟಿಕೆಯಿಂದ ಇದ್ದು ಮತ್ತು ಆರೋಗ್ಯ ಕಾಪಾಡಿಕೊಂಡು ದಕ್ಷವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಈ ವಿನೂತನ ಕ್ರಮಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಬಂದೋಬಸ್ತ್ಗೆಸರ್ಕಾರದ ಆದೇಶದ ಮೇರೆಗೆ ತೆರಳಲಿರುವ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಪಡೆಯ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಜೊತೆಯಲ್ಲಿ ಒಯ್ಯುವುದಕ್ಕಾಗಿ ಕ್ರೀಡಾ ಪರಿಕರಗಳನ್ನು ಶುಕ್ರವಾರ ವಿತರಿಸಲಾಯಿತು.</p>.<p>ಇಲ್ಲಿನ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್, ಎಲ್ಲ ತುಕಡಿಗಳ ಸಿಬ್ಬಂದಿಗೆ ವಾಲಿಬಾಲ್ ನೆಟ್, ಫುಟ್ಬಾಲ್, ಚೆಸ್ ಮತ್ತು ಕೇರಂ ಬೋರ್ಡ್ಗಳನ್ನು ವಿತರಿಸಿದರು.</p>.<p>‘ಕೆಎಸ್ಆರ್ಪಿ ಎಡಿಜಿಪಿ ಅಲೋಕ್ಕುಮಾರ್ ನೇತೃತ್ವದಲ್ಲಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯದ ಚುನಾವಣೆ ಮತ್ತು ಕಾನೂನು ಸುವ್ಯವಸ್ಥೆಯ ಬಂದೋಬಸ್ತ್ ಕರ್ತವ್ಯದಲ್ಲಿದ್ದಾಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಸದೃಢವಾಗಿರಲೆಂಬ ದೃಷ್ಟಿಯಿಂದ ಕ್ರೀಡಾ ಪರಿಕರಗಳನ್ನು ವಿತರಿಸಲಾಗಿದೆ.</p>.<p>ಇದರಿಂದ ಅವರು ಚಟುವಟಿಕೆಯಿಂದ ಇದ್ದು ಮತ್ತು ಆರೋಗ್ಯ ಕಾಪಾಡಿಕೊಂಡು ದಕ್ಷವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಈ ವಿನೂತನ ಕ್ರಮಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>