ಈ ವೇಳೆ ಮಾತನಾಡಿದ ಅಧ್ಯಕ್ಷ ಪ್ರಮೋದ್ ಮುತಾಲಿಕ್, ‘ಸರ್ಕಾರವು ಕೋವಿಡ್ ನಿರ್ಬಂಧಗಳನ್ನು ತೆರವಗೊಳಿಸಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ಕೊಟ್ಟಿದೆ. ಮಾರುಕಟ್ಟೆ, ಪಬ್, ಕ್ಲಬ್, ಸಿನಿಮಾ ಮಂದಿರ, ಶಾಲಾ–ಕಾಲೇಜುಗಳಿಗೆ ವಿನಾಯಿತಿ ನೀಡಿದೆ. ಎಲ್ಲ ಚಟುವಟಿಕೆಗಳೂ ನಡೆಯುತ್ತಿವೆ. ಆದರೆ, ಹಿಂದೂ ಧರ್ಮದ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಮುಂದುವರಿಸಿರುವುದು ಸರಿಯಲ್ಲ’ ಎಂದು ತಿಳಿಸಿದರು.