‘ದಾಳಿಕೋರರು ಒಂದು ಸ್ಕೂಟರ್, ಒಂದು ಬೈಕ್ ಮೇಲೆ ಬಂದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಬಂದ ಮೂವರು ತಾವಾಗೇ ಶರಣಾಗಿದ್ದಾರೆ. ಆದರೆ, ಬೈಕಿನಲ್ಲಿದ್ದವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿಲ್ಲ. ಕ್ಯಾಂಪ್ ಠಾಣೆಗೆ ಹಾಜರಾಗಬೇಕಾದ ಆರೋಪಿಗಳನ್ನು ಕೆಲವರು ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಇಂಥ ನಟೋರಿಯಸ್ ಕೈದಿಗಳನ್ನು ಕೇಂದ್ರ ಕಾರಾಗೃಹದಲ್ಲಿ ಇಡುವ ಬದಲು, ಬೈಲಹೊಂಗಲ ಉಪಕಾರಾಗೃಹಕ್ಕೆ ಕಳುಹಿಸಿದ್ದಾರೆ. ಇದೆಲ್ಲದರ ಹಿಂದೆ ರಾಜಕೀಯ ಕೈವಾಡವಿದೆ’ ಎಂದೂ ಆರೋಪಿಸಿದರು.