ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ‘ಪರೀಕ್ಷೆಯಲ್ಲಿ ಪಶ್ನೆಪತ್ರಿಕೆ ಸೋರಿಕೆಯಾದರೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.
ಡಿಡಿಪಿಐ ಮೋಹನಕುಮಾರ ಹಂಚಾಟೆ, ‘ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಗೃಹ ಮತ್ತಿತರ ಮೂಲಸೌಕರ್ಯ ಒದಗಿಸಲಾಗಿದೆ’ ಎಂದು ತಿಳಿಸಿದರು.