ಹೋಳಿ ಹುಣ್ಣಿಮೆ ಅಂಗವಾಗಿ ಬೆಳಗಾವಿಯಲ್ಲಿ ಬಣ್ಣದಾಟವಿದ್ದ ಕಾರಣ, ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ತುಸು ತೊಂದರೆಯಾಯಿತು. ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳು ಏಕಕಾಲಕ್ಕೆ ಹೊರಬಂದಿದ್ದರಿಂದ ಮತ್ತು ಜನರು ಅಲ್ಲಿಯೇ ಬಣ್ಣವಾಡುತ್ತಿದ್ದ ಕಾರಣ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ರಾಣಿ ಚನ್ನಮ್ಮನ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಂಚಾರ ಸಮಸ್ಯೆ ತಲೆದೋರಿತ್ತು.