ಬೆಳಗಾವಿ: ಇಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿರುವ, ಮಹಾರಾಷ್ಟ್ರದ ಗಡಿಗಳಲ್ಲಿರುವ ಗ್ರಾಮಗಳ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗಿದೆ.
ಶಿರಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಕ್ಕಳು ಪ್ರಯಾಣಿಸಿದರು. ಅವರಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಗಜಾನನ ಮನ್ನಿಕೇರಿ ಶುಭ ಹಾರೈಸಿ, ಪರೀಕ್ಷಾ ಕೇಂದ್ರಗಳಿಗೆ ಬೀಳ್ಕೊಟ್ಟರು.