<p><strong>ಬೆಳಗಾವಿ:</strong> ‘ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳು ಜೀವನದ ಅತ್ಯಂತ ಮಹತ್ವದ ಘಟ್ಟಗಳು. ಈ ನಿಟ್ಟಿನಲ್ಲಿ ಕಠಿಣ ಮಟ್ಟದ ಓದಿನಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಕನಸು ಕಾಣಬೇಕು’ ಎಂದು ಕಿರಣ ಗಣಾಚಾರಿ ಕರೆ ನೀಡಿದರು.</p>.<p>ಕೆಎಲ್ಇ ಸಂಸ್ಥೆಯ ಗಿಲಗಿಂಚಿ ಅರಟಾಳ ಪದವಿಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮಿಲನದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಭವಿಷ್ಯದ ಜೀವನವನ್ನು ಗಮನದಲ್ಲಿಟ್ಟು ಕೊಂಡು ಶಿಕ್ಷಕರು ಪ್ರತಿ ದಿನ ರಾತ್ರಿ 8 ಗಂಟೆಗೆ ಮತ್ತು ಬೆಳಗಿನ ಜಾವ 4 ಗಂಟೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಳ ಬಗ್ಗೆ ವಿಚಾರಣೆ ನಡೆಸಿ ಅವರನ್ನು ಪ್ರೇರೇಪಿಸುತ್ತಿದ್ದಾರೆ. ಸ್ವಂತ ಮಕ್ಕಳನ್ನು ಸಹ ಈ ರೀತಿ ನೋಡದೆ ತಾವು ಕಲಿಸಿದ ವಿದ್ಯಾರ್ಥಿಗಳನ್ನು ತಿದ್ದುವಲ್ಲಿ ಶಿಕ್ಷಕರು ಮಾಡುತ್ತಿರುವ ಕೆಲಸ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಸಿ.ಪಿ.ದೇವಋಷಿ ಮಾತನಾಡಿದರು. ಪ್ರಾಚಾರ್ಯ ಡಿ.ಎಸ್.ಪವಾರ, ಶಾಲಾ ಪ್ರಧಾನಿ ಶ್ರೇಯಾ ಕುಂದರನಾಡ, ಹುಸೇನ ಪಠಾಣ ವೇದಿಕೆ ಮೇಲಿದ್ದರು.</p>.<p>ಶ್ರೀನಿಧಿ ಬೊಮ್ಮನ್ನವರ ಪ್ರಾರ್ಥಿಸಿದರು. ಎ.ಆರ್.ಪಾಟೀಲ ಸ್ವಾಗತಿಸಿದರು. ಎಸ್.ಜೆ.ಏಳುಕೋಟಿ ಪರಿಚಯಿಸಿದರು. ಒಕ್ಕೂಟದ ಅಧ್ಯಕ್ಷೆ ಎಸ್.ಬಿ.ಕೋರೆ ವರದಿ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳು ಜೀವನದ ಅತ್ಯಂತ ಮಹತ್ವದ ಘಟ್ಟಗಳು. ಈ ನಿಟ್ಟಿನಲ್ಲಿ ಕಠಿಣ ಮಟ್ಟದ ಓದಿನಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಕನಸು ಕಾಣಬೇಕು’ ಎಂದು ಕಿರಣ ಗಣಾಚಾರಿ ಕರೆ ನೀಡಿದರು.</p>.<p>ಕೆಎಲ್ಇ ಸಂಸ್ಥೆಯ ಗಿಲಗಿಂಚಿ ಅರಟಾಳ ಪದವಿಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮಿಲನದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಭವಿಷ್ಯದ ಜೀವನವನ್ನು ಗಮನದಲ್ಲಿಟ್ಟು ಕೊಂಡು ಶಿಕ್ಷಕರು ಪ್ರತಿ ದಿನ ರಾತ್ರಿ 8 ಗಂಟೆಗೆ ಮತ್ತು ಬೆಳಗಿನ ಜಾವ 4 ಗಂಟೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಳ ಬಗ್ಗೆ ವಿಚಾರಣೆ ನಡೆಸಿ ಅವರನ್ನು ಪ್ರೇರೇಪಿಸುತ್ತಿದ್ದಾರೆ. ಸ್ವಂತ ಮಕ್ಕಳನ್ನು ಸಹ ಈ ರೀತಿ ನೋಡದೆ ತಾವು ಕಲಿಸಿದ ವಿದ್ಯಾರ್ಥಿಗಳನ್ನು ತಿದ್ದುವಲ್ಲಿ ಶಿಕ್ಷಕರು ಮಾಡುತ್ತಿರುವ ಕೆಲಸ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಸಿ.ಪಿ.ದೇವಋಷಿ ಮಾತನಾಡಿದರು. ಪ್ರಾಚಾರ್ಯ ಡಿ.ಎಸ್.ಪವಾರ, ಶಾಲಾ ಪ್ರಧಾನಿ ಶ್ರೇಯಾ ಕುಂದರನಾಡ, ಹುಸೇನ ಪಠಾಣ ವೇದಿಕೆ ಮೇಲಿದ್ದರು.</p>.<p>ಶ್ರೀನಿಧಿ ಬೊಮ್ಮನ್ನವರ ಪ್ರಾರ್ಥಿಸಿದರು. ಎ.ಆರ್.ಪಾಟೀಲ ಸ್ವಾಗತಿಸಿದರು. ಎಸ್.ಜೆ.ಏಳುಕೋಟಿ ಪರಿಚಯಿಸಿದರು. ಒಕ್ಕೂಟದ ಅಧ್ಯಕ್ಷೆ ಎಸ್.ಬಿ.ಕೋರೆ ವರದಿ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>