ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಎಪಿಎಂಸಿ ಹೊರಗೆ ಮಾರಾಟ ಮಾಡಿದರೆ ದಂಡ ವಿಧಿಸಲಾಗುತ್ತಿತ್ತು ಮತ್ತು ನೋಟಿಸ್ ಕೊಡಲಾಗುತ್ತಿತ್ತು. ಈ ಎರಡನ್ನೂ ತೆಗೆದು ಹಾಕಿದ್ದೇವೆ. ಬೆಳಗಾವಿಯಲ್ಲಿ ಬೆಳೆದವರು ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಬೇಕಾದರೂ ಮಾರಬಹುದು. ಇದರಿಂದ ಯಾವ ರೈತರಿಗೂ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ’ ಎಂದು ಸಮರ್ಥಿಸಿಕೊಂಡರು.