ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಟುಂಬಿಕ ವ್ಯಾಜ್ಯ ಬಗೆಹರಿಸಲು ಮುಂದಾದ ವ್ಯಕ್ತಿಗೆ ಚೂರಿ ಇರಿತ

Last Updated 5 ಜನವರಿ 2019, 15:54 IST
ಅಕ್ಷರ ಗಾತ್ರ

ಬೆಳಗಾವಿ: ಕುಟುಂಬ ಸದಸ್ಯರ ನಡುವಿನ ಜಗಳ ಬಿಡಿಸಲು ಮುಂದಾದ ಇಲ್ಲಿನ ಚಂದು ಗಲ್ಲಿಯ ನಿವಾಸಿ ಯುಸೂಫ್‌ ಶಾನವಾಲೇ (50) ಅವರನ್ನು ಶನಿವಾರ ಸಂಜೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.

ಕುಟುಂಬ ಸದಸ್ಯರ ನಡುವಿನ ವ್ಯಾಜ್ಯವನ್ನು ಬಗೆಹರಿಸಿಕೊಳ್ಳಲು ಮನೆಯಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ವಾಗ್ವಾದ ಉಂಟಾಗಿ, ಅಲ್ತಾಫ್‌ ಅವರು ಚೂರಿಯಿಂದ ಇರಿದು ಪರಾರಿಯಾದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಯುಸೂಫ್‌ ಕೊನೆಯುಸಿರೆಳೆದರು. ಮಾರ್ಕೆಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT