<p><strong>ಲಕ್ಷ್ಮೇಶ್ವರ:</strong> ‘10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಭರವಸೆ ನೀಡಿ, ಕೇಂದ್ರದತ್ತ ಕೈ ತೋರಿಸುವ ಬದಲು ರಾಜ್ಯ ಸರ್ಕಾರವೇ ಆವರ್ತ ನಿಧಿಯಿಂದ ₹ 300 ಕೋಟಿ ವ್ಯಯಿಸಿ ಮೆಕ್ಕೆಜೋಳ ಖರೀದಿಸಲಿ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.</p>.<p>ಇಲ್ಲಿನ ಶಿಗ್ಲಿ ಕ್ರಾಸ್ನಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲ್ಲೂಕಿನ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನೀತಿಯಡಿ ಕೆಲಸ ಮಾಡಿದರೆ ರೈತರಿಗೆ ಅನುಕೂಲ. ಸಂಘರ್ಷ ಮಾಡಿದರೆ ನಷ್ಟವಾಗುತ್ತದೆ. ರೈತರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ’ ಎಂದರು.</p>.<p>‘ರೈತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು. ₹2,400 ದರ ನಿರೀಕ್ಷೆಯಲ್ಲಿ ರೈತರು ಮೆಕ್ಕೆಜೋಳ ತರುತ್ತಿದ್ದಾರೆ, ಆದರೆ ದರ ₹1,600ಕ್ಕೆ ಕುಸಿದಿದೆ. ಈಗ ಸರ್ಕಾರವೇ ಖರೀದಿಗೆ ಮುಂದಾದರೆ, ದರವೂ ಏರಿಕೆ ಆಗುತ್ತದೆ’ ಎಂದು ಅಭಿಪ್ರಾಯಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ‘10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಭರವಸೆ ನೀಡಿ, ಕೇಂದ್ರದತ್ತ ಕೈ ತೋರಿಸುವ ಬದಲು ರಾಜ್ಯ ಸರ್ಕಾರವೇ ಆವರ್ತ ನಿಧಿಯಿಂದ ₹ 300 ಕೋಟಿ ವ್ಯಯಿಸಿ ಮೆಕ್ಕೆಜೋಳ ಖರೀದಿಸಲಿ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.</p>.<p>ಇಲ್ಲಿನ ಶಿಗ್ಲಿ ಕ್ರಾಸ್ನಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲ್ಲೂಕಿನ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನೀತಿಯಡಿ ಕೆಲಸ ಮಾಡಿದರೆ ರೈತರಿಗೆ ಅನುಕೂಲ. ಸಂಘರ್ಷ ಮಾಡಿದರೆ ನಷ್ಟವಾಗುತ್ತದೆ. ರೈತರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ’ ಎಂದರು.</p>.<p>‘ರೈತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು. ₹2,400 ದರ ನಿರೀಕ್ಷೆಯಲ್ಲಿ ರೈತರು ಮೆಕ್ಕೆಜೋಳ ತರುತ್ತಿದ್ದಾರೆ, ಆದರೆ ದರ ₹1,600ಕ್ಕೆ ಕುಸಿದಿದೆ. ಈಗ ಸರ್ಕಾರವೇ ಖರೀದಿಗೆ ಮುಂದಾದರೆ, ದರವೂ ಏರಿಕೆ ಆಗುತ್ತದೆ’ ಎಂದು ಅಭಿಪ್ರಾಯಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>