<p><strong>ಬೆಳಗಾವಿ:</strong> ‘ಕೋವಿಡ್–19 ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ಕೊರತೆಯಿದೆ. ಕೆಲವು ಕಡೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ರೋಗಿಗಳು ರಸ್ತೆಯ ಮೇಲೆ ಬಿದ್ದಿರುವುದನ್ನು ನೋಡಿದ್ದೇವೆ. ಇದನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿವಿಧ ಸಂಘ– ಸಂಸ್ಥೆಗಳು, ನೌಕರರು, ಸಾರ್ವಜನಿಕರು ನೀಡಿದ ಸಾಕಷ್ಟು ಹಣ ಸರ್ಕಾರದ ಬಳಿ ಇದೆ. ಹಣದ ಕೊರತೆ ಇಲ್ಲ. ಈ ಹಣವನ್ನು ಉಪಯೋಗಿಸಿ, ಜನಪರ ಕೆಲಸ ಮಾಡಬೇಕು’ ಎಂದರು.</p>.<p>‘ಟೆಸ್ಟ್ಗೆ ₹ 4,500 ದರ ನಿಗದಿಪಡಿಸಿದ್ದಾರೆ. ಇಷ್ಟು ದುಡ್ಡು ಕೊಟ್ಟು ಮಾಡಿಸಲು ಶ್ರೀಮಂತರಿಗೇ ಸಾಧ್ಯವಾಗುವುದಿಲ್ಲ. ಇನ್ನು ಬಡವರಿಗೆ ದೂರದ ಮಾತು. ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದರು.</p>.<p>ಜನರಿಗೆ ತೊಂದರೆ:</p>.<p>‘ನಗರದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿದರೆ ಜನರಿಗೆ ತೊಂದರೆಯಾಗುತ್ತದೆ. ಇವುಗಳನ್ನು ಸ್ಥಳಾಂತರಿಸಬಾರದು. ರಾಜ್ಯ ಮಟ್ಟದ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿದರೆ ಅಧಿಕಾರಿಗಳು ಬರುವುದಿಲ್ಲ. ಹೀಗಾಗಿ ಏನೂ ಮಾಡಲಾಗದ ಸ್ಥಿತಿ ಇದೆ. ವರ್ಷಕ್ಕೊಮ್ಮೆ ಅಧಿವೇಶನ ನಡೆಸಬೇಕಷ್ಟೇ’ ಎಂದು ಹೇಳಿದರು.</p>.<p><strong>ಆಣೆ ಮಾಡಿಸಿ:</strong> ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ನಡೆದಿರುವ ‘ಕುಕ್ಕರ್ ಫೈಟ್’ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕುಕ್ಕರ್ ಬಂದ್ ಮಾಡುವುದು ಚಾಲೂ ಮಾಡುವುದು ಎಲ್ಲ ನಿಮ್ಮ (ಮಾಧ್ಯಮ) ಕೈಯಲ್ಲಿ ಇದೆ’ ಎಂದರು.</p>.<p>‘ಇಬ್ಬರನ್ನೂ ಯಾವುದಾದರೂ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ, ಆಣೆ ಪ್ರಮಾಣ ಮಾಡಿಸಿ. ಯಾರು ಸುಳ್ಳು ಹೇಳುತ್ತಿದ್ದಾರೆ, ಯಾರು ನಿಜ ಹೇಳುತ್ತಿದ್ದಾರೆ ಎನ್ನುವುದು ಗೊತ್ತಾಗಬೇಕಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೋವಿಡ್–19 ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ಕೊರತೆಯಿದೆ. ಕೆಲವು ಕಡೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ರೋಗಿಗಳು ರಸ್ತೆಯ ಮೇಲೆ ಬಿದ್ದಿರುವುದನ್ನು ನೋಡಿದ್ದೇವೆ. ಇದನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿವಿಧ ಸಂಘ– ಸಂಸ್ಥೆಗಳು, ನೌಕರರು, ಸಾರ್ವಜನಿಕರು ನೀಡಿದ ಸಾಕಷ್ಟು ಹಣ ಸರ್ಕಾರದ ಬಳಿ ಇದೆ. ಹಣದ ಕೊರತೆ ಇಲ್ಲ. ಈ ಹಣವನ್ನು ಉಪಯೋಗಿಸಿ, ಜನಪರ ಕೆಲಸ ಮಾಡಬೇಕು’ ಎಂದರು.</p>.<p>‘ಟೆಸ್ಟ್ಗೆ ₹ 4,500 ದರ ನಿಗದಿಪಡಿಸಿದ್ದಾರೆ. ಇಷ್ಟು ದುಡ್ಡು ಕೊಟ್ಟು ಮಾಡಿಸಲು ಶ್ರೀಮಂತರಿಗೇ ಸಾಧ್ಯವಾಗುವುದಿಲ್ಲ. ಇನ್ನು ಬಡವರಿಗೆ ದೂರದ ಮಾತು. ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದರು.</p>.<p>ಜನರಿಗೆ ತೊಂದರೆ:</p>.<p>‘ನಗರದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿದರೆ ಜನರಿಗೆ ತೊಂದರೆಯಾಗುತ್ತದೆ. ಇವುಗಳನ್ನು ಸ್ಥಳಾಂತರಿಸಬಾರದು. ರಾಜ್ಯ ಮಟ್ಟದ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿದರೆ ಅಧಿಕಾರಿಗಳು ಬರುವುದಿಲ್ಲ. ಹೀಗಾಗಿ ಏನೂ ಮಾಡಲಾಗದ ಸ್ಥಿತಿ ಇದೆ. ವರ್ಷಕ್ಕೊಮ್ಮೆ ಅಧಿವೇಶನ ನಡೆಸಬೇಕಷ್ಟೇ’ ಎಂದು ಹೇಳಿದರು.</p>.<p><strong>ಆಣೆ ಮಾಡಿಸಿ:</strong> ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ನಡೆದಿರುವ ‘ಕುಕ್ಕರ್ ಫೈಟ್’ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕುಕ್ಕರ್ ಬಂದ್ ಮಾಡುವುದು ಚಾಲೂ ಮಾಡುವುದು ಎಲ್ಲ ನಿಮ್ಮ (ಮಾಧ್ಯಮ) ಕೈಯಲ್ಲಿ ಇದೆ’ ಎಂದರು.</p>.<p>‘ಇಬ್ಬರನ್ನೂ ಯಾವುದಾದರೂ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ, ಆಣೆ ಪ್ರಮಾಣ ಮಾಡಿಸಿ. ಯಾರು ಸುಳ್ಳು ಹೇಳುತ್ತಿದ್ದಾರೆ, ಯಾರು ನಿಜ ಹೇಳುತ್ತಿದ್ದಾರೆ ಎನ್ನುವುದು ಗೊತ್ತಾಗಬೇಕಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>