<p><strong>ಬೆಳಗಾವಿ: </strong>‘ರಾಜ್ಯ ಮಾಹಿತಿ ಹಕ್ಕು ಆಯೋಗದ ಬೆಳಗಾವಿ ಪೀಠದ ಕಲಾಪಗಳನ್ನು ಮಾರ್ಚ್ನಲ್ಲಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ರಾಜ್ಯ ಮಾಹಿತಿ ಆಯುಕ್ತರಾದ ಗೀತಾ ಬಿ.ವಿ. ತಿಳಿಸಿದರು.</p>.<p>ಮಾಹಿತಿ ಆಯೋಗದ ಪೀಠ ಸ್ಥಾಪನೆಗೆ ಗುರುತಿಸಿರುವ ಕಟ್ಟಡವನ್ನು ಸೋಮವಾರ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಡಾ.ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿರುವ ತಮನ್ನಾ ಆರ್ಕೇಡ್ನಲ್ಲಿ ಪೀಠ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗತ್ಯ ಪೀಠೋಪಕರಣ ಮತ್ತಿತರ ಕಾಮಗಾರಿಗೆ ₹ 69.50 ಲಕ್ಷ ಅನುದಾನ ಕೋರಿ ಸರ್ಕಾರಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನದ ಬಿಡುಗಡೆಯಾದ ತಕ್ಷಣ ಪೀಠದ ಕಲಾಪಗಳನ್ನು ಆರಂಭಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಪ್ರಕರಣಗಳ ಸಂಖ್ಯೆ ಆಧರಿಸಿ ಇಲ್ಲೊಂದು ಪೀಠ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. 3ಸಾವಿರ ಪ್ರಕರಣಗಳು ನಡೆಯುತ್ತಿವೆ. ಬೆಳಗಾವಿ ಪೀಠದಲ್ಲಿ ವ್ಯಾಪ್ತಿಯ ಬಗ್ಗೆ ಚರ್ಚೆ ನಡೆದಿದೆ. 8 ಜಿಲ್ಲೆಗಳ ವ್ಯಾಪ್ತಿ ನಿಗದಿಯಾಗುವ ಸಾಧ್ಯತೆ ಇದೆ. ಕಟ್ಟಡದ ಒಳಾಂಗಣ ವಿನ್ಯಾಸ ಮತ್ತು ಪೀಠೋಪಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅಗತ್ಯ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p class="Subhead"><strong>ದುರ್ಬಳಕೆ- ಕ್ರಮಕ್ಕೆ ಅವಕಾಶ</strong></p>.<p>‘ಮಾಹಿತಿ ಹಕ್ಕು ಕಾಯ್ದೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಹಿತಾಸಕ್ತಿ ಇಲ್ಲದೇ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸುವ ಹಾಗೂ ವಿನಾಕಾರಣ ಅರ್ಜಿ ಸಲ್ಲಿಸುವವರನ್ನು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧಿಸಲು ಅವಕಾಶವಿದೆ. ಕಾಯ್ದೆ ದುರ್ಬಳಕೆ ಮಾಡಿಕೊಳ್ಳುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ನೂತನ ಪೀಠದ ಕಟ್ಟಡ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ರಾಜ್ಯ ಮಾಹಿತಿ ಹಕ್ಕು ಆಯೋಗದ ಬೆಳಗಾವಿ ಪೀಠದ ಕಲಾಪಗಳನ್ನು ಮಾರ್ಚ್ನಲ್ಲಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ರಾಜ್ಯ ಮಾಹಿತಿ ಆಯುಕ್ತರಾದ ಗೀತಾ ಬಿ.ವಿ. ತಿಳಿಸಿದರು.</p>.<p>ಮಾಹಿತಿ ಆಯೋಗದ ಪೀಠ ಸ್ಥಾಪನೆಗೆ ಗುರುತಿಸಿರುವ ಕಟ್ಟಡವನ್ನು ಸೋಮವಾರ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಡಾ.ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿರುವ ತಮನ್ನಾ ಆರ್ಕೇಡ್ನಲ್ಲಿ ಪೀಠ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗತ್ಯ ಪೀಠೋಪಕರಣ ಮತ್ತಿತರ ಕಾಮಗಾರಿಗೆ ₹ 69.50 ಲಕ್ಷ ಅನುದಾನ ಕೋರಿ ಸರ್ಕಾರಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನದ ಬಿಡುಗಡೆಯಾದ ತಕ್ಷಣ ಪೀಠದ ಕಲಾಪಗಳನ್ನು ಆರಂಭಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಪ್ರಕರಣಗಳ ಸಂಖ್ಯೆ ಆಧರಿಸಿ ಇಲ್ಲೊಂದು ಪೀಠ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. 3ಸಾವಿರ ಪ್ರಕರಣಗಳು ನಡೆಯುತ್ತಿವೆ. ಬೆಳಗಾವಿ ಪೀಠದಲ್ಲಿ ವ್ಯಾಪ್ತಿಯ ಬಗ್ಗೆ ಚರ್ಚೆ ನಡೆದಿದೆ. 8 ಜಿಲ್ಲೆಗಳ ವ್ಯಾಪ್ತಿ ನಿಗದಿಯಾಗುವ ಸಾಧ್ಯತೆ ಇದೆ. ಕಟ್ಟಡದ ಒಳಾಂಗಣ ವಿನ್ಯಾಸ ಮತ್ತು ಪೀಠೋಪಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅಗತ್ಯ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p class="Subhead"><strong>ದುರ್ಬಳಕೆ- ಕ್ರಮಕ್ಕೆ ಅವಕಾಶ</strong></p>.<p>‘ಮಾಹಿತಿ ಹಕ್ಕು ಕಾಯ್ದೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಹಿತಾಸಕ್ತಿ ಇಲ್ಲದೇ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸುವ ಹಾಗೂ ವಿನಾಕಾರಣ ಅರ್ಜಿ ಸಲ್ಲಿಸುವವರನ್ನು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧಿಸಲು ಅವಕಾಶವಿದೆ. ಕಾಯ್ದೆ ದುರ್ಬಳಕೆ ಮಾಡಿಕೊಳ್ಳುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.</p>.<p>‘ನೂತನ ಪೀಠದ ಕಟ್ಟಡ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>