ಬೆಳಗಾವಿ: ‘ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್ ಹಾಗೂ ಮನೋಜ್ ದೇಸೂರಕರ್ ಮೇಲೆ ನಡೆದ ಗುಂಡಿನ ದಾಳಿ ಖಂಡನಾರ್ಹ. ನಿಮ್ಮ ಗುಂಡಿನ ದಾಳಿ, ಬಾಂಬ್, ಕತ್ತಿಗಳ ದಾಳಿಗೆ ನಾವು ಹೆದರುವುದಿಲ್ಲ. ಈ ಘಟನೆ ಖಂಡಿಸಿ ಭಾನುವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದ್ದಾರೆ.