ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಈಚೆಗೆ ಕಲ್ಲು ತೂರಾಟ ಮಾಡಿ ಮೂರು ಮನೆ ಹಾಗೂ ನಾಲ್ಕು ವಾಹನಗಳಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರೇಮ ಪ್ರಕರಣವೊಂದರಲ್ಲಿ ಬುದ್ಧಿವಾದ ಹೇಳಿದ ಪಂಚರಾದ ಮಾರುತಿ ಹುರಕಡ್ಲಿ, ಸಂಜಯ ಹುಂದರವಾಡಿ ಮತ್ತು ಇನ್ನೊಬ್ಬರ ಮನೆ ಮೇಲೆ ಕಲ್ಲು ತೂರಲಾಗಿತ್ತು. ದೂರು ಆಧರಿಸಿ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.