ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಲ್ಲು ತೂರಾಟ- 3 ಪ್ರಕರಣ ದಾಖಲು, 27 ಆರೋಪಿಗಳ ಬಂಧನ

Last Updated 18 ಡಿಸೆಂಬರ್ 2021, 4:11 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ವಿವಿಧೆಡೆ ಶುಕ್ರವಾರ ತಡರಾತ್ರಿ ಹಲವು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ಹಾಗೂ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. 27 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ರಾಣಿ ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ನಡುವೆ,‌ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲು ರಾಯಣ್ಣನ ಅಭಿಮಾನಿಗಳು ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಜಮಾಯಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT