ಈ ನಡುವೆ ಪ್ರತಿಭಟನಾಕಾರರಲ್ಲಿ ಕೆಲವರು, ರಸ್ತೆಯಲ್ಲಿ ಹಾಕಿದ್ದ ರಮೇಶ ಜಾರಕಿಹೊಳಿ ಕಟೌಟ್ಗೆ ಹಾಲಿನ ಅಭಿಷೇಕವನ್ನೂ ಮಾಡಿದ್ದಾರೆ. ರಮೇಶ ವಿರುದ್ಧ ದೂರು ನೀಡಿದ ದಿನೇಶ ಕಲ್ಲಹಳ್ಳಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದ್ದಾರೆ. ಹೀಗಾಗಿ, ಗೋಕಾಕದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.