<p><strong>ಬೆಳಗಾವಿ</strong>: ಇಲ್ಲಿನ ಸಂಗಮೇಶ್ವರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿನಿಲಯದ ಮೇಲೆ ಗುಂಪೊಂದು ಕಲ್ಲುತೂರಾಟ ನಡೆಸಿದ್ದರಿಂದ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಹಾಸ್ಟೆಲ್ನ ಕಿಟಕಿಗಳ ಗಾಜು ಜಖಂ ಆಗಿದೆ. 20ಕ್ಕೂ ಹೆಚ್ಚು ಮಂದಿ ಅತಿಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ದಾಂದಲೆ ನಡೆಸಿದ್ದಾರೆ. ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ರಾಡ್, ಬ್ಯಾಟ್, ಕಟ್ಟಿಗೆ ತಂದಿದ್ದರು. ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಸೈಕಲ್ ಜಖಂಗೊಳಿಸಿದ್ದಾರೆ.</p>.<p>‘ಘಟನೆ ನಡೆದು ಬಹಳ ಸಮಯವಾದರೂ, ಹಿರಿಯ ಪೊಲೀಸ್ ಆಧಿಕಾರಿಗಳಾಗಲಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಸ್ಥಳಕ್ಕೆ ಬಂದಿಲ್ಲ. ನಾಲ್ವರು ಕಾನ್ಸ್ಟೆಬಲ್ಗಳನಷ್ಟೆ ನಿಯೋಜಿಸಲಾಗಿದೆ. ಕಿಡಿಗೇಡಿಗಳಿಂದ ನಡೆದಿರುವ ಈ ಕೃತ್ಯದಿಂದ ನಮಗೆ ಆತಂಕ ಉಂಟಾಗಿದೆ. ಅಪರಿಚಿತರು ಬಂದು ಏಕಾಏಕಿ ದಾಳಿ ನಡೆಸಿದ್ದಾರೆ’ ಎಂದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಎಪಿಎಂಸಿ ಠಾಣೆ ಇನ್ಸ್ಪೆಕ್ಟರ್ ಜಾವೇದ್ ಮುಶಾಪುರಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಸಂಗಮೇಶ್ವರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕರ ವಿದ್ಯಾರ್ಥಿನಿಲಯದ ಮೇಲೆ ಗುಂಪೊಂದು ಕಲ್ಲುತೂರಾಟ ನಡೆಸಿದ್ದರಿಂದ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ಹಾಸ್ಟೆಲ್ನ ಕಿಟಕಿಗಳ ಗಾಜು ಜಖಂ ಆಗಿದೆ. 20ಕ್ಕೂ ಹೆಚ್ಚು ಮಂದಿ ಅತಿಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ದಾಂದಲೆ ನಡೆಸಿದ್ದಾರೆ. ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ರಾಡ್, ಬ್ಯಾಟ್, ಕಟ್ಟಿಗೆ ತಂದಿದ್ದರು. ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಸೈಕಲ್ ಜಖಂಗೊಳಿಸಿದ್ದಾರೆ.</p>.<p>‘ಘಟನೆ ನಡೆದು ಬಹಳ ಸಮಯವಾದರೂ, ಹಿರಿಯ ಪೊಲೀಸ್ ಆಧಿಕಾರಿಗಳಾಗಲಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಸ್ಥಳಕ್ಕೆ ಬಂದಿಲ್ಲ. ನಾಲ್ವರು ಕಾನ್ಸ್ಟೆಬಲ್ಗಳನಷ್ಟೆ ನಿಯೋಜಿಸಲಾಗಿದೆ. ಕಿಡಿಗೇಡಿಗಳಿಂದ ನಡೆದಿರುವ ಈ ಕೃತ್ಯದಿಂದ ನಮಗೆ ಆತಂಕ ಉಂಟಾಗಿದೆ. ಅಪರಿಚಿತರು ಬಂದು ಏಕಾಏಕಿ ದಾಳಿ ನಡೆಸಿದ್ದಾರೆ’ ಎಂದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಎಪಿಎಂಸಿ ಠಾಣೆ ಇನ್ಸ್ಪೆಕ್ಟರ್ ಜಾವೇದ್ ಮುಶಾಪುರಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>