ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರ ರಚಿಸಿರುವ ಮಕ್ಕಳ ಕಾವಲು ಸಮಿತಿ ಕ್ರಿಯಾಶೀಲಗೊಳಿಸಬೇಕು. ಮೌಢ್ಯ ಆಚರಣೆಗಳಿಂದ ಜನರನ್ನು ಹೊರತಂದು, ಬಾಲ್ಯವಿವಾಹದಿಂದ ದೂರ ಉಳಿಯುವಂತೆ ಪ್ರೇರಣೆ ನೀಡಬೇಕು. ಸರ್ಕಾರದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅನುಷ್ಠಾನಕ್ಕೆ ತರಬೇಕು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಕರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ, ಸಭೆಗಳನ್ನು ನಡೆಸಬೇಕು’ ಎಂದು ನಿರ್ದೇಶನ ನೀಡಿದರು.