<p><strong>ಬೆಳಗಾವಿ:</strong> ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಕಾರ್ಯಾಲಯಗಳ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿರುವುದನ್ನು ಖಂಡಿಸಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಸರ್ಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ದೇಶದ ವಿವಿಧೆಡೆ ಪಿಎಫ್ಐ ನಾಯಕರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಇಡಿಯಿಂದ ದಾಳಿ ಮಾಡಿಸಲಾಗಿದೆ. ಇದನ್ನು ಗಮನಿಸಿದರೆ, ಏಜೆನ್ಸಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಬದಲಿಗೆ ಬಿಜೆಪಿಯ ಅಸ್ತ್ರವಾಗಿ ಬಳಕೆ ಆಗುತ್ತಿವೆ’ ಎಂದು ದೂರಿದರು.</p>.<p>‘ಬಿಜೆಪಿಯ ಜನ ವಿರೋಧಿ ಸಿದ್ಧಾಂತದ ವಿರುದ್ಧ ರಾಜಿ ಇಲ್ಲದ ನಿಲುವು ಹೊಂದಿರುವ ಕಾರಣಕ್ಕಾಗಿ ಪಿಎಫ್ಐ ಬೇಟೆ ಆಡಲಾಗುತ್ತಿದೆ. ಮುಸ್ಲಿಮರು ಸೇರಿದಂತೆ ಶೋಷಿತ ಎಲ್ಲ ಸಮುದಾಯಗಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಸಂಘಟನೆಯು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಕಾನೂನು ರಕ್ಷಣೆಯ ಜವಾಬ್ದಾರಿಯನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರಿ ಏಜೆನ್ಸಿನಗಳ ದುರ್ಬಳಕೆ ತಡೆದು, ಅವುಗಳ ವಿಶ್ವಾಸಾರ್ಹತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಕಾರ್ಯಾಲಯಗಳ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿರುವುದನ್ನು ಖಂಡಿಸಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಸರ್ಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ದೇಶದ ವಿವಿಧೆಡೆ ಪಿಎಫ್ಐ ನಾಯಕರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಇಡಿಯಿಂದ ದಾಳಿ ಮಾಡಿಸಲಾಗಿದೆ. ಇದನ್ನು ಗಮನಿಸಿದರೆ, ಏಜೆನ್ಸಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಬದಲಿಗೆ ಬಿಜೆಪಿಯ ಅಸ್ತ್ರವಾಗಿ ಬಳಕೆ ಆಗುತ್ತಿವೆ’ ಎಂದು ದೂರಿದರು.</p>.<p>‘ಬಿಜೆಪಿಯ ಜನ ವಿರೋಧಿ ಸಿದ್ಧಾಂತದ ವಿರುದ್ಧ ರಾಜಿ ಇಲ್ಲದ ನಿಲುವು ಹೊಂದಿರುವ ಕಾರಣಕ್ಕಾಗಿ ಪಿಎಫ್ಐ ಬೇಟೆ ಆಡಲಾಗುತ್ತಿದೆ. ಮುಸ್ಲಿಮರು ಸೇರಿದಂತೆ ಶೋಷಿತ ಎಲ್ಲ ಸಮುದಾಯಗಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಸಂಘಟನೆಯು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಕಾನೂನು ರಕ್ಷಣೆಯ ಜವಾಬ್ದಾರಿಯನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರಿ ಏಜೆನ್ಸಿನಗಳ ದುರ್ಬಳಕೆ ತಡೆದು, ಅವುಗಳ ವಿಶ್ವಾಸಾರ್ಹತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>