<p><strong>ರಾಮದುರ್ಗ (ಬೆಳಗಾವಿ ಜಿಲ್ಲೆ): </strong>ಇಲ್ಲಿ ಅತ್ಯಾರ್ಷಕ ಅಲಂಕಾರಿಕ ಬದಿ ದೀಪಗಳ ಉದ್ಘಾಟನೆಯ ನಂತರ ಬಹುತೇಕರು ಸೆಲ್ಫಿ ಹಾಗೂ ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡು ಸಂಭ್ರಮಿಸಿದ್ದರು. ಅಷ್ಟೊಂದು ಪ್ರಮಾಣದಲ್ಲಿ ಆ ದೀಪಗಳು ಬೆಳಗಿ ಕಂಗೊಳಿಸಿದ್ದವು.</p>.<p>ಆದರೆ, ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರಾಸಕ್ತಿಯಿಂದಾಗಿ ದೀಪಗಳು ಬೆಳಗುತ್ತಿಲ್ಲ. ಅವು ಇದ್ದೂ ಇಲ್ಲದಂತಾಗಿದೆ. ಇದರಿಂದ ಪಟ್ಟಣ ಕತ್ತಲಲ್ಲಿ ಮುಳುಗಿ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಕೆ–ಶಿಫ್ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿಪಡಿಸಿದ ನಂತರ ವಿಭಜಕದ ಮಧ್ಯೆ ಅಲಂಕಾರಿಕ ದೀಪಗಳನ್ನು ಅಳವಡಿಸಿ ಪಟ್ಟಣ ಸುಂದರಗೊಳ್ಳುವಂತೆ ಮಾಡಲಾಗಿತ್ತು. ರಸ್ತೆ ಬದಿಗೆ ಇದ್ದ ವಿದ್ಯುತ್ಕಂಬಗಳನ್ನು ತೆರವುಗೊಳಿಸಲಾಗಿತ್ತು. ಉದ್ಘಾಟನೆಗೆ ಜನಪ್ರತಿನಿಧಿಗಳು ಉತ್ಸಾಹದಿಂದ ಬಂದು ಜನರಿಂದ ಮನ್ನಣೆ ಪಡೆದುಕೊಂಡಿದ್ದರು.</p>.<p>ಅಂಬೇಡ್ಕರ್ ನಗರದಿಂದ ಸಂಗೊಳ್ಳಿ ರಾಯಣ್ಣ ರಸ್ತೆವರೆಗೆ ಅಳವಡಿಸಿದ್ದ ಅಲಂಕಾರಿಕ ರಸ್ತೆ ದೀಪಗಳು ಅದೆಷ್ಟೋ ಜನರಿಗೆ ಖುಷಿ ನೀಡಿದ್ದವು. ಬಳಿಕ ಅವುಗಳ ನಿರ್ವಹಣೆ ಇಲ್ಲದೇ ಪ್ರಯೋಜನಕ್ಕೆ ಬಾರದಂತಾಗಿದೆ. ಕೆಲವು ದೀಪಗಳು ಹಾಳಾಗಿವೆ. ಕೆಲವು ಕಂಬಗಳು ಬಿದ್ದು ಹೋಗಿವೆ.</p>.<p>ಜವಾಬ್ದಾರಿ ಹೊತ್ತಿರುವ ಕೆ–ಶಿಫ್ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪುರಸಭೆಯವರು ಇತ್ತ ಗಮನ ನೀಡಿಲ್ಲ. ತಮಗೆ ಸಂಬಂಧವೇ ಇಲ್ಲ ಎನ್ನುವಂತೆ ವರ್ತನೆ ಮಾಡುತ್ತಿರುವುದು ಬೇಸರ ತರಿಸಿದೆ ಎನ್ನುತ್ತಾರೆ ಜನರು.</p>.<p>ತೇರ ಬಜಾರ್, ಹುತಾತ್ಮ ಚೌಕ, ಹಳೆ ಬಸ್ನಿಲ್ದಾಣ, ಹಳೇ ಪೊಲೀಸ್ ಠಾಣೆ, ಮಿನಿ ವಿಧಾನಸೌಧದ ಮುಂದೆ ಅಳವಡಿಸಿರುವ ಹೈಮಾಸ್ಟ್ ವಿದ್ಯುತ್ ದೀಪಗಳು ಕೂಡ ಕೆಲಸ ನಿಲ್ಲಿಸಿ ಅನೇಕ ತಿಂಗಳುಗಳೇ ಕಳೆದಿವೆ. ಅವುಗಳನ್ನು ದುರಸ್ತಿ ಮಾಡುವ ಗೋಜಿಗೆ ಯಾರೂ ಮುಂದಾಗುತ್ತಿಲ್ಲ.</p>.<p>‘2019ರಲ್ಲಿ ಕೆ–ಶಿಪ್ನಿಂದ ಪುರಸಭೆಗೆ ಹಸ್ತಾಂತರಿಸಲಾಗಿದೆ. ನಿರ್ವಹಣೆಗಾಗಿಗುತ್ತಿಗೆದಾರರಿಗೆ ನೀಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸಾಮಗ್ರಿಗಳ ಪೂರರೈಕೆ ಆಗದೆ ದುರಸ್ತಿ ಮಾಡಲು ಸಾಧ್ಯವಾಗಿಲ್ಲ’ ಎಂದು ಪುರಸಭೆಯ ಸ್ಯಾನಿಟರಿ ಇನ್ಸ್ಪೆಕ್ಟರ್ ಚಂದನ್ ಪಾಟೀಲ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ (ಬೆಳಗಾವಿ ಜಿಲ್ಲೆ): </strong>ಇಲ್ಲಿ ಅತ್ಯಾರ್ಷಕ ಅಲಂಕಾರಿಕ ಬದಿ ದೀಪಗಳ ಉದ್ಘಾಟನೆಯ ನಂತರ ಬಹುತೇಕರು ಸೆಲ್ಫಿ ಹಾಗೂ ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡು ಸಂಭ್ರಮಿಸಿದ್ದರು. ಅಷ್ಟೊಂದು ಪ್ರಮಾಣದಲ್ಲಿ ಆ ದೀಪಗಳು ಬೆಳಗಿ ಕಂಗೊಳಿಸಿದ್ದವು.</p>.<p>ಆದರೆ, ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರಾಸಕ್ತಿಯಿಂದಾಗಿ ದೀಪಗಳು ಬೆಳಗುತ್ತಿಲ್ಲ. ಅವು ಇದ್ದೂ ಇಲ್ಲದಂತಾಗಿದೆ. ಇದರಿಂದ ಪಟ್ಟಣ ಕತ್ತಲಲ್ಲಿ ಮುಳುಗಿ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಕೆ–ಶಿಫ್ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿಪಡಿಸಿದ ನಂತರ ವಿಭಜಕದ ಮಧ್ಯೆ ಅಲಂಕಾರಿಕ ದೀಪಗಳನ್ನು ಅಳವಡಿಸಿ ಪಟ್ಟಣ ಸುಂದರಗೊಳ್ಳುವಂತೆ ಮಾಡಲಾಗಿತ್ತು. ರಸ್ತೆ ಬದಿಗೆ ಇದ್ದ ವಿದ್ಯುತ್ಕಂಬಗಳನ್ನು ತೆರವುಗೊಳಿಸಲಾಗಿತ್ತು. ಉದ್ಘಾಟನೆಗೆ ಜನಪ್ರತಿನಿಧಿಗಳು ಉತ್ಸಾಹದಿಂದ ಬಂದು ಜನರಿಂದ ಮನ್ನಣೆ ಪಡೆದುಕೊಂಡಿದ್ದರು.</p>.<p>ಅಂಬೇಡ್ಕರ್ ನಗರದಿಂದ ಸಂಗೊಳ್ಳಿ ರಾಯಣ್ಣ ರಸ್ತೆವರೆಗೆ ಅಳವಡಿಸಿದ್ದ ಅಲಂಕಾರಿಕ ರಸ್ತೆ ದೀಪಗಳು ಅದೆಷ್ಟೋ ಜನರಿಗೆ ಖುಷಿ ನೀಡಿದ್ದವು. ಬಳಿಕ ಅವುಗಳ ನಿರ್ವಹಣೆ ಇಲ್ಲದೇ ಪ್ರಯೋಜನಕ್ಕೆ ಬಾರದಂತಾಗಿದೆ. ಕೆಲವು ದೀಪಗಳು ಹಾಳಾಗಿವೆ. ಕೆಲವು ಕಂಬಗಳು ಬಿದ್ದು ಹೋಗಿವೆ.</p>.<p>ಜವಾಬ್ದಾರಿ ಹೊತ್ತಿರುವ ಕೆ–ಶಿಫ್ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪುರಸಭೆಯವರು ಇತ್ತ ಗಮನ ನೀಡಿಲ್ಲ. ತಮಗೆ ಸಂಬಂಧವೇ ಇಲ್ಲ ಎನ್ನುವಂತೆ ವರ್ತನೆ ಮಾಡುತ್ತಿರುವುದು ಬೇಸರ ತರಿಸಿದೆ ಎನ್ನುತ್ತಾರೆ ಜನರು.</p>.<p>ತೇರ ಬಜಾರ್, ಹುತಾತ್ಮ ಚೌಕ, ಹಳೆ ಬಸ್ನಿಲ್ದಾಣ, ಹಳೇ ಪೊಲೀಸ್ ಠಾಣೆ, ಮಿನಿ ವಿಧಾನಸೌಧದ ಮುಂದೆ ಅಳವಡಿಸಿರುವ ಹೈಮಾಸ್ಟ್ ವಿದ್ಯುತ್ ದೀಪಗಳು ಕೂಡ ಕೆಲಸ ನಿಲ್ಲಿಸಿ ಅನೇಕ ತಿಂಗಳುಗಳೇ ಕಳೆದಿವೆ. ಅವುಗಳನ್ನು ದುರಸ್ತಿ ಮಾಡುವ ಗೋಜಿಗೆ ಯಾರೂ ಮುಂದಾಗುತ್ತಿಲ್ಲ.</p>.<p>‘2019ರಲ್ಲಿ ಕೆ–ಶಿಪ್ನಿಂದ ಪುರಸಭೆಗೆ ಹಸ್ತಾಂತರಿಸಲಾಗಿದೆ. ನಿರ್ವಹಣೆಗಾಗಿಗುತ್ತಿಗೆದಾರರಿಗೆ ನೀಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸಾಮಗ್ರಿಗಳ ಪೂರರೈಕೆ ಆಗದೆ ದುರಸ್ತಿ ಮಾಡಲು ಸಾಧ್ಯವಾಗಿಲ್ಲ’ ಎಂದು ಪುರಸಭೆಯ ಸ್ಯಾನಿಟರಿ ಇನ್ಸ್ಪೆಕ್ಟರ್ ಚಂದನ್ ಪಾಟೀಲ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>