ಕಾಲೇಜಿನ ಶುಲ್ಕ ಭರಿಸದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ
ಖಾನಾಪುರ (ಬೆಳಗಾವಿ): ವಿದ್ಯಾರ್ಥಿನಿಯೊಬ್ಬರು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತರು.
‘ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದರು. ಪ್ರಥಮ ವರ್ಷ ಮುಗಿಸಿದ್ದರು. ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್–19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದಾರೆ’ ಎಂದು ನಂದಗಡ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.