ಜಿಲ್ಲೆಯಾದ್ಯಂತ 1,557 ಶಾಲೆಗಳ 1,42,380 ವಿದ್ಯಾರ್ಥಿಗಳು ವಿವಿಧ ಮಾಧ್ಯಮಗಳ ಮೂಲಕ ವೀಕ್ಷಿಸಿದರು. ಸಂವಾದದಲ್ಲಿ ನೇರವಾಗಿ ಭಾಗವಹಿಸಲು ಜಿಲ್ಲೆಯಿಂದ ವಿದ್ಯಾರ್ಥಿಗಳಾದ ಶ್ರೇಯಸ್ ಮಾರ್ಗನಕೊಪ್ಪ ಹಾಗೂ ಜಾಹ್ನವಿ ದ್ವಿವೇದಿ ಅವರಿಗೆ ಅವಕಾಶ ಸಿಕ್ಕಿತು. ಈ ವಿದ್ಯಾರ್ಥಿಗಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಶೇಷ ಪ್ರಶಸ್ತಿ ಪತ್ರ ಹಾಗೂ ಪರೀಕ್ಷಾ ಪೇ ಚರ್ಚಾ ಕಿಟ್ ಅನ್ನು ಬಹುಮಾನವಾಗಿ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.