<p><strong>ಬೆಳಗಾವಿ</strong>: ‘ವಿದ್ಯಾರ್ಥಿಗಳು ರಾಷ್ಟ್ರದ ಬಹುದೊಡ್ಡ ಆಸ್ತಿ. ಅವರು ಗುಣಾತ್ಮಕ ಶಿಕ್ಷಣ ಪಡೆಯುವ ಜತೆಗೆ, ಸಂಸ್ಕಾರವಂತರಾಬೇಕು’ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.</p>.<p>ಇಲ್ಲಿನ ಲಿಂಗರಾಜ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ–ಕೈರೋಸ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾವು ಸಾಕಷ್ಟು ಓದಿ ಸಂಸ್ಕಾರವಂತರಾಗದೆ ಹೋದರೆ, ಬದುಕಿಗೆ ಅರ್ಥ ಬರುವುದಿಲ್ಲ. ಜೀವನ ರೂಪಿಸಿದ ತಂದೆ–ತಾಯಿ, ಗುರುಗಳನ್ನು ಸದಾ ಸ್ಮರಿಸಬೇಕು. ಇಂದು ನೈತಿಕ ಶಿಕ್ಷಣದ ಕೊರತೆಯಿಂದ ಸಮಾಜ ದಾರಿ ತಪ್ಪುತ್ತಿದೆ. ಅದಕ್ಕೆ ಜೀವನಕ್ಕೆ ಸಂಸ್ಕಾರ ಅಗತ್ಯವಾಗಿದೆ’ ಎಂದರು.</p>.<p>ಬೆಳಗಾವಿ ನಗರ ಬಿಇಒ ರವಿ ಭಜಂತ್ರಿ ಮಾತನಾಡಿದರು. </p>.<p>ಪದವಿ ವಿಭಾಗದ ಪ್ರಾಚಾರ್ಯ ಎಚ್.ಎಸ್.ಮೇಲಿನಮನಿ, ಹರಿಲಿನ್ ಷಾ, ಸಾನ್ವಿ ಕಾಲಕುಂದ್ರಿ ಇದ್ದರು. ಪಿಯು ವಿಭಾಗದ ಪ್ರಾಚಾರ್ಯೆ ಗಿರಿಜಾ ಹಿರೇಮಠ ಸ್ವಾಗತಿಸಿದರು. ಎಸ್.ಮಲ್ಘಾನ್ ವಂದಿಸಿದರು. ಕೃಷಿಕಾ ಮಿಶ್ರಾ ಮತ್ತು ಸುಮಿತ ಕಾಂಬ್ಳೆ ನಿರೂಪಿಸಿದರು.</p>.<p>Quote - ನಾವು ಯಾವ ಧರ್ಮದಲ್ಲಿ ಹುಟ್ಟಿದ್ದೇವೆ ಎಂಬುದು ಮುಖ್ಯವಲ್ಲ. ಬದಲಿಗೆ ಸಿಕ್ಕ ಅವಕಾಶ ಬಳಸಿಕೊಂಡು ಅಗಾಧವಾದ ಸಾಧನೆ ಮಾಡಿದರೆ ಸಮಾಜಕ್ಕೆ ಮಾದರಿಯಾಗುತ್ತೇವೆ ಮಹಾಂತೇಶ ಕವಟಗಿಮಠ ನಿರ್ದೇಶಕ ಕೆಎಲ್ಇ ಸಂಸ್ಥೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ವಿದ್ಯಾರ್ಥಿಗಳು ರಾಷ್ಟ್ರದ ಬಹುದೊಡ್ಡ ಆಸ್ತಿ. ಅವರು ಗುಣಾತ್ಮಕ ಶಿಕ್ಷಣ ಪಡೆಯುವ ಜತೆಗೆ, ಸಂಸ್ಕಾರವಂತರಾಬೇಕು’ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.</p>.<p>ಇಲ್ಲಿನ ಲಿಂಗರಾಜ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ–ಕೈರೋಸ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾವು ಸಾಕಷ್ಟು ಓದಿ ಸಂಸ್ಕಾರವಂತರಾಗದೆ ಹೋದರೆ, ಬದುಕಿಗೆ ಅರ್ಥ ಬರುವುದಿಲ್ಲ. ಜೀವನ ರೂಪಿಸಿದ ತಂದೆ–ತಾಯಿ, ಗುರುಗಳನ್ನು ಸದಾ ಸ್ಮರಿಸಬೇಕು. ಇಂದು ನೈತಿಕ ಶಿಕ್ಷಣದ ಕೊರತೆಯಿಂದ ಸಮಾಜ ದಾರಿ ತಪ್ಪುತ್ತಿದೆ. ಅದಕ್ಕೆ ಜೀವನಕ್ಕೆ ಸಂಸ್ಕಾರ ಅಗತ್ಯವಾಗಿದೆ’ ಎಂದರು.</p>.<p>ಬೆಳಗಾವಿ ನಗರ ಬಿಇಒ ರವಿ ಭಜಂತ್ರಿ ಮಾತನಾಡಿದರು. </p>.<p>ಪದವಿ ವಿಭಾಗದ ಪ್ರಾಚಾರ್ಯ ಎಚ್.ಎಸ್.ಮೇಲಿನಮನಿ, ಹರಿಲಿನ್ ಷಾ, ಸಾನ್ವಿ ಕಾಲಕುಂದ್ರಿ ಇದ್ದರು. ಪಿಯು ವಿಭಾಗದ ಪ್ರಾಚಾರ್ಯೆ ಗಿರಿಜಾ ಹಿರೇಮಠ ಸ್ವಾಗತಿಸಿದರು. ಎಸ್.ಮಲ್ಘಾನ್ ವಂದಿಸಿದರು. ಕೃಷಿಕಾ ಮಿಶ್ರಾ ಮತ್ತು ಸುಮಿತ ಕಾಂಬ್ಳೆ ನಿರೂಪಿಸಿದರು.</p>.<p>Quote - ನಾವು ಯಾವ ಧರ್ಮದಲ್ಲಿ ಹುಟ್ಟಿದ್ದೇವೆ ಎಂಬುದು ಮುಖ್ಯವಲ್ಲ. ಬದಲಿಗೆ ಸಿಕ್ಕ ಅವಕಾಶ ಬಳಸಿಕೊಂಡು ಅಗಾಧವಾದ ಸಾಧನೆ ಮಾಡಿದರೆ ಸಮಾಜಕ್ಕೆ ಮಾದರಿಯಾಗುತ್ತೇವೆ ಮಹಾಂತೇಶ ಕವಟಗಿಮಠ ನಿರ್ದೇಶಕ ಕೆಎಲ್ಇ ಸಂಸ್ಥೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>