<p><strong>ಅಥಣಿ</strong>: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ನಿರ್ದಿಷ್ಟ ಗುರಿ ಇಟ್ಟುಕೊಂಡು ಸತತ ಪ್ರಯತ್ನಪಟ್ಟು ಸಾಧನೆ ಮಾಡಬೇಕು ಎಂದು ಐ.ಆರ್.ಮಠಪತಿ ಹೇಳಿದರು.</p>.<p>ಸಮೀಪದ ಸತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಮಠ ಮಾತನಾಡಿ, ’ಮಕ್ಕಳು ಪರೀಕ್ಷೆ ಬಗ್ಗೆ ಭಯಪಡದೆ ಆತ್ಮವಿಶ್ವಾಸದಿಂದ ಬರೆಯಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಡೇಪ್ಪ ಕುಂಬಾರ, ಎಸ್ಡಿಎಂಸಿ ಅಧ್ಯಕ್ಷ ರಾವಸಾಬ ಜಿನರಾಳ, ಹಿರಿಯ ಮುಖಂಡ ಪ್ರಕಾಶ ಭೂಷಣ್ಣವರ, ಅಶೋಕ ಜಗದೇವ, ಮಹಾದೇವಗೌಡ ಪಾಟೀಲ, ಪುಲಿಕೇಶ ದೊಡ್ಡಮನಿ, ಪಿಡಿಒ ಭುವನೇಶ್ವರಿ ಹಿರೇಮಠ, ಸಿಆರ್ಪಿ ಆರತಿ ಖೋತ, ಸಂಜೀವ ಗಡ್ಯಾಗೋಳ, ಎಸ್.ಕೆ.ಕುಂಬಾರ, ಮಲ್ಲೇಶ ದೊಡ್ಡಮನಿಸೇರಿದಂತೆ ಅನೇಕರು ಇದ್ದರು.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ, ನಗದು ಬಹುಮಾನ ನೀಡಿ ಗೌರವಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ನಿರ್ದಿಷ್ಟ ಗುರಿ ಇಟ್ಟುಕೊಂಡು ಸತತ ಪ್ರಯತ್ನಪಟ್ಟು ಸಾಧನೆ ಮಾಡಬೇಕು ಎಂದು ಐ.ಆರ್.ಮಠಪತಿ ಹೇಳಿದರು.</p>.<p>ಸಮೀಪದ ಸತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಮಠ ಮಾತನಾಡಿ, ’ಮಕ್ಕಳು ಪರೀಕ್ಷೆ ಬಗ್ಗೆ ಭಯಪಡದೆ ಆತ್ಮವಿಶ್ವಾಸದಿಂದ ಬರೆಯಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಡೇಪ್ಪ ಕುಂಬಾರ, ಎಸ್ಡಿಎಂಸಿ ಅಧ್ಯಕ್ಷ ರಾವಸಾಬ ಜಿನರಾಳ, ಹಿರಿಯ ಮುಖಂಡ ಪ್ರಕಾಶ ಭೂಷಣ್ಣವರ, ಅಶೋಕ ಜಗದೇವ, ಮಹಾದೇವಗೌಡ ಪಾಟೀಲ, ಪುಲಿಕೇಶ ದೊಡ್ಡಮನಿ, ಪಿಡಿಒ ಭುವನೇಶ್ವರಿ ಹಿರೇಮಠ, ಸಿಆರ್ಪಿ ಆರತಿ ಖೋತ, ಸಂಜೀವ ಗಡ್ಯಾಗೋಳ, ಎಸ್.ಕೆ.ಕುಂಬಾರ, ಮಲ್ಲೇಶ ದೊಡ್ಡಮನಿಸೇರಿದಂತೆ ಅನೇಕರು ಇದ್ದರು.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ, ನಗದು ಬಹುಮಾನ ನೀಡಿ ಗೌರವಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>