ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಎಸಿಬಿ ಬಲೆಗೆ ಸಬ್ ರಿಜಿಸ್ಟ್ರಾರ್, ಬಾಂಡ್ ರೈಟರ್

Last Updated 9 ಮಾರ್ಚ್ 2022, 12:58 IST
ಅಕ್ಷರ ಗಾತ್ರ

ಬೆಳಗಾವಿ: ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಿಸಿದ ದಾಖಲಾತಿಗಳನ್ನು ನೀಡಲು ಲಂಚ ಕೇಳಿದ ಜಿಲ್ಲೆಯ ಸವದತ್ತಿ ತಾಲ್ಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಹಣ ಪಡೆಯುತ್ತಿದ್ದ ಬಾಂಡ್ ರೈಟರ್ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ.

ಸಬ್ ರಿಜಿಸ್ಟ್ರಾರ್ ಸಂಜೀವ ವೀರಭದ್ರ ಕಪಾಲಿ ಹಾಗೂ ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಆರೋಪಿಗಳು. ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

‘ಸಬ್‌ ರಿಜಿಸ್ಟ್ರಾರ್‌ ದಾಖಲೆ ಪತ್ರಗಳನ್ನು ನೀಡಲು ವಿನಾಕಾರಣ ವಿಳಂಬ ಧೋರಣೆ ತೋರುತ್ತಿರುವುದಲ್ಲದೆ, ಪ್ರಶ್ನಿಸಿದರೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಸವದತ್ತಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಶಿವಪ್ಪ ವರಗಣ್ಣವರ ಎನ್ನುವವರು ಎಸಿಬಿಗೆ ದೂರು ನೀಡಿದ್ದರು. ₹4ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ (ಉತ್ತರ ವಲಯ) ಎಸ್ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರಶೆಟ್ಟಿ ಮತ್ತು ಇನ್‌ಸ್ಪೆಕ್ಟರ್ ಎ.ಎಸ್. ಗುದಿಗೊಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT