‘ಸಬ್ ರಿಜಿಸ್ಟ್ರಾರ್ ದಾಖಲೆ ಪತ್ರಗಳನ್ನು ನೀಡಲು ವಿನಾಕಾರಣ ವಿಳಂಬ ಧೋರಣೆ ತೋರುತ್ತಿರುವುದಲ್ಲದೆ, ಪ್ರಶ್ನಿಸಿದರೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಸವದತ್ತಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಶಿವಪ್ಪ ವರಗಣ್ಣವರ ಎನ್ನುವವರು ಎಸಿಬಿಗೆ ದೂರು ನೀಡಿದ್ದರು. ₹4ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.