<p><b>ಬೆಳಗಾವಿ</b><b>:</b> ಸರ್ಕಾರಕ್ಕೆ ರಾಜಸ್ವ ನಷ್ಟ ಉಂಟು ಮಾಡಿರುವುದರಿಂದ ಇಲ್ಲಿನ ಉಪ ನೋಂದಣಿ ಕಚೇರಿಯ ಉಪ ನೋಂದಣಾಧಿಕಾರಿ ವಿಷ್ಣುತೀರ್ಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.</p>.<p>ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.</p>.<p>ಮಹಾಲೇಖಪಾಲರು 2018–19ನೇ ಸಾಲಿನಲ್ಲಿ ಕಚೇರಿಯಲ್ಲಿ ತಪಾಸಣೆ ನಡೆಸಿ, 2015ರಿಂದ 2018ರ 9 ದಸ್ತಾವೇಜುಗಳಿಂದ ₹12 ಕೋಟಿಗೂ ಹೆಚ್ಚಿನ ಕೊರತೆ ಕಂಡುಬಂದಿದೆ ಎಂದು ಆಕ್ಷೇಪಿಸಿದ್ದರು. ಆಸ್ತಿ ನೋಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೋಂದಣಿ ಮಾಡಲಾಗಿದೆ. ಮುದ್ರಾಂಕ ಶುಲ್ಕ ₹12,78,79,056 ಹಾಗೂ ನೋಂದಣಿ ಶುಲ್ಕ ₹12,91,707 ಕಡಿಮೆ ಆಕರಿಸಿದ್ದನ್ನು ಪತ್ತೆ ಹಚ್ಚಲಾಗಿತ್ತು. ಕೊರತೆ ಮೊತ್ತವನ್ನು ನಿಮ್ಮಿಂದ ವಸೂಲಿ ಮಾಡಬಾರದೇಕೆ ಹಾಗೂ ಅಮಾನತಿನಲ್ಲಿ ಇಡಬಾರದೇಕೆ ಎಂದು ವಿಷ್ಣುತೀರ್ಥ ಅವರಿಗೆ ನೋಟಿಸ್ ಜಾರಿಗೊಳಿಸಿ, ಸಮಜಾಯಿಷಿ ಕೇಳಲಾಗಿತ್ತು.</p>.<p>‘2015-16ನೇ ಸಾಲಿನಲ್ಲಿ ಜಾರಿಯಲ್ಲಿದ್ದ ಮಾರ್ಗಸೂಚಿ ದರ ಅಳವಡಿಸಿ ದಸ್ತಾವೇಜನ್ನು ನೋಂದಾಯಿಸಲಾಗಿದೆ. ಬೆಳಗಾವಿ ನಗರದಲ್ಲಿ ಕೃಷಿ ಜಮೀನಿನ ಮೌಲ್ಯ ಪ್ರತಿ ಎಕರೆಗೆ ₹ 26.84 ಲಕ್ಷ ಇದ್ದುದ್ದನ್ನು ವಾಣಿಜ್ಯ ಉದ್ದೇಶಕ್ಕಾಗಿ ಶೇ 75ರಷ್ಟು ಹೆಚ್ಚಿಸಿ ₹46.97 ಲಕ್ಷ ನಿಗದಿಪಡಿಸಲಾಗಿತ್ತು’ ಎಂದು ಅಧಿಕಾರಿ ಲಿಖಿತ ಹೇಳಿಕೆ ನೀಡಿದ್ದರು.</p>.<p>‘ಅವರ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಉದ್ದೇಶಪೂರ್ವಕವಾಗಿ ದುರುದ್ದೇಶದಿಂದ ಅಭಿವೃದ್ಧಿ ಹೊಂದದ ಭೂಪರಿವರ್ತಿತ ಜಮೀನಿನ ದರ ಅನುಸರಿಸಿ, ಸ್ವತ್ತುಗಳ ಅಪಮೌಲ್ಯಗೊಳಿಸಿ ನೋಂದಾಯಿಸಿ ಸರ್ಕಾರಕ್ಕೆ ₹12.91 ಕೋಟಿ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ, ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಉಪ ನೋಂದಣಾಧಿಕಾರಿಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿರುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><b>ಬೆಳಗಾವಿ</b><b>:</b> ಸರ್ಕಾರಕ್ಕೆ ರಾಜಸ್ವ ನಷ್ಟ ಉಂಟು ಮಾಡಿರುವುದರಿಂದ ಇಲ್ಲಿನ ಉಪ ನೋಂದಣಿ ಕಚೇರಿಯ ಉಪ ನೋಂದಣಾಧಿಕಾರಿ ವಿಷ್ಣುತೀರ್ಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.</p>.<p>ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.</p>.<p>ಮಹಾಲೇಖಪಾಲರು 2018–19ನೇ ಸಾಲಿನಲ್ಲಿ ಕಚೇರಿಯಲ್ಲಿ ತಪಾಸಣೆ ನಡೆಸಿ, 2015ರಿಂದ 2018ರ 9 ದಸ್ತಾವೇಜುಗಳಿಂದ ₹12 ಕೋಟಿಗೂ ಹೆಚ್ಚಿನ ಕೊರತೆ ಕಂಡುಬಂದಿದೆ ಎಂದು ಆಕ್ಷೇಪಿಸಿದ್ದರು. ಆಸ್ತಿ ನೋಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೋಂದಣಿ ಮಾಡಲಾಗಿದೆ. ಮುದ್ರಾಂಕ ಶುಲ್ಕ ₹12,78,79,056 ಹಾಗೂ ನೋಂದಣಿ ಶುಲ್ಕ ₹12,91,707 ಕಡಿಮೆ ಆಕರಿಸಿದ್ದನ್ನು ಪತ್ತೆ ಹಚ್ಚಲಾಗಿತ್ತು. ಕೊರತೆ ಮೊತ್ತವನ್ನು ನಿಮ್ಮಿಂದ ವಸೂಲಿ ಮಾಡಬಾರದೇಕೆ ಹಾಗೂ ಅಮಾನತಿನಲ್ಲಿ ಇಡಬಾರದೇಕೆ ಎಂದು ವಿಷ್ಣುತೀರ್ಥ ಅವರಿಗೆ ನೋಟಿಸ್ ಜಾರಿಗೊಳಿಸಿ, ಸಮಜಾಯಿಷಿ ಕೇಳಲಾಗಿತ್ತು.</p>.<p>‘2015-16ನೇ ಸಾಲಿನಲ್ಲಿ ಜಾರಿಯಲ್ಲಿದ್ದ ಮಾರ್ಗಸೂಚಿ ದರ ಅಳವಡಿಸಿ ದಸ್ತಾವೇಜನ್ನು ನೋಂದಾಯಿಸಲಾಗಿದೆ. ಬೆಳಗಾವಿ ನಗರದಲ್ಲಿ ಕೃಷಿ ಜಮೀನಿನ ಮೌಲ್ಯ ಪ್ರತಿ ಎಕರೆಗೆ ₹ 26.84 ಲಕ್ಷ ಇದ್ದುದ್ದನ್ನು ವಾಣಿಜ್ಯ ಉದ್ದೇಶಕ್ಕಾಗಿ ಶೇ 75ರಷ್ಟು ಹೆಚ್ಚಿಸಿ ₹46.97 ಲಕ್ಷ ನಿಗದಿಪಡಿಸಲಾಗಿತ್ತು’ ಎಂದು ಅಧಿಕಾರಿ ಲಿಖಿತ ಹೇಳಿಕೆ ನೀಡಿದ್ದರು.</p>.<p>‘ಅವರ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಉದ್ದೇಶಪೂರ್ವಕವಾಗಿ ದುರುದ್ದೇಶದಿಂದ ಅಭಿವೃದ್ಧಿ ಹೊಂದದ ಭೂಪರಿವರ್ತಿತ ಜಮೀನಿನ ದರ ಅನುಸರಿಸಿ, ಸ್ವತ್ತುಗಳ ಅಪಮೌಲ್ಯಗೊಳಿಸಿ ನೋಂದಾಯಿಸಿ ಸರ್ಕಾರಕ್ಕೆ ₹12.91 ಕೋಟಿ ರಾಜಸ್ವ ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ, ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಉಪ ನೋಂದಣಾಧಿಕಾರಿಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿರುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>