ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ನೀರು; ಸಂಚಾರಕ್ಕೆ ಮುಕ್ತವಾದ ಸೇತುವೆ

Last Updated 2 ಜುಲೈ 2019, 11:41 IST
ಅಕ್ಷರ ಗಾತ್ರ

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದಲ್ಲಿ ಸುರಿಯುತ್ತಿದ್ದ ಮಳೆ ಮಂಗಳವಾರ ಕ್ಷೀಣಿಸಿದೆ. ಇದರ ಪರಿಣಾಮವಾಗಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಹರಿವು ಇಳಿಮುಖವಾಗಿದೆ. ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಭೋಜವಾಡಿ– ಕುನ್ನೂರ ಗ್ರಾಮಗಳ ನಡುವಿನ ವೇದಗಂಗಾ ನದಿಗೆ ನಿರ್ಮಿಸಲಾಗಿರುವ ಸೇತುವೆ ಮೇಲೆ ಹರಿಯುತ್ತಿದ್ದ ನೀರು ತಗ್ಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ.

ನಿಪ್ಪಾಣಿ ತಾಲ್ಲೂಕಿನ ಕಾರದಗಾ– ಭೋಜ ಗ್ರಾಮಗಳ ಮಧ್ಯೆ ಇರುವ ಸೇತುವೆ ಮೇಲೆ ವೇದಗಂಗಾ ಹಾಗೂ ಮಲಿಕವಾಡ– ದತ್ತವಾಡ ಗ್ರಾಮಗಳ ಮಧ್ಯೆದ ಸೇತುವೆ ಮೇಲೆ ದೂಧ್‌ಗಂಗಾ ನದಿ ನೀರು ಹರಿಯುತ್ತಿದ್ದು, ಇನ್ನೂ ಜಲಾವೃತ ಸ್ಥಿತಿಯಲ್ಲಿಯೇ ಇವೆ.

ರಾಜಾಪುರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ 25,000 ಕ್ಯುಸೆಕ್‌ ನೀರು ಹರಿದಿದೆ. ಜಿಲ್ಲೆಯಲ್ಲಿ ಮಂಗಳವಾರ ಮಳೆ ಸಂಪೂರ್ಣವಾಗಿ ಕ್ಷೀಣಿಸಿದೆ. ಬೆಳಗಾವಿಯಲ್ಲಿ ಬೆಳಿಗ್ಗೆ ಕೆಲಹೊತ್ತು ಜಿಟಿಜಿಟಿ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT