<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ಉತ್ತರ ಕನ್ನಡ ಜಿಲ್ಲೆಯ ರಾಮನಗರದಿಂದ ತಾಲ್ಲೂಕಿನ ಲೋಂಡಾ, ಗುಂಜಿ ಮಾರ್ಗವಾಗಿ ಮಂಗಳವಾರ ಬೆಳಿಗ್ಗೆ ಪಟ್ಟಣಕ್ಕೆ ಬರುತ್ತಿದ್ದ ರಾಮನಗರ-ಬೆಳಗಾವಿ ಬಸ್ನಲ್ಲಿ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಸಿದ್ದರಿಂದ ಪ್ರಯಾಣಿಕರ ಮಧ್ಯೆ ಸಿಲುಕಿದ್ದ ಇಬ್ಬರು ವಿದ್ಯಾರ್ಥಿನಿಯರು ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದಾರೆ.</p>.<p>ಬಸ್ನಲ್ಲಿ ಲೋಂಡಾದಿಂದ ಪಟ್ಟಣದ ಕಾಲೇಜಿಗೆ ಹೊರಟಿದ್ದ 60-70 ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಹತ್ತಿದ್ದಾರೆ. ರಾಮನಗರ-ಖಾನಾಪುರ ಮಾರ್ಗದ ರಸ್ತೆ ದುಃಸ್ಥಿತಿಯಲ್ಲಿರುವ ಕಾರಣ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಧೂಳಿನ ಭಯದಿಂದಾಗಿ ಬಸ್ನ ಎಲ್ಲ ಕಿಟಕಿ-ಬಾಗಿಲುಗಳನ್ನು ಮುಚ್ಚಿದ್ದರು. ಬಸ್ ಗುಂಜಿ ಗ್ರಾಮದ ಬಳಿ ಬರುತ್ತಲೇ ಇಬ್ಬರು ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಬಸ್ ನಿರ್ವಾಹಕ ಮತ್ತು ಚಾಲಕ ಬಸ್ಅನ್ನು ನೇರವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದು ಅವರಿಗೆ ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಸುದ್ದಿ ತಿಳಿದು ಆಸ್ಪತ್ರೆಯ ಮುಂದೆ ವಿದ್ಯಾರ್ಥಿಗಳು, ಪಾಲಕರು ಮತ್ತು ಸ್ಥಳೀಯರು ಸೇರಿದ್ದರು. ಸ್ಥಳಕ್ಕಾಗಮಿಸಿದ ವಾಯವ್ಯ ಸಂಸ್ಥೆಯ ಅಧಿಕಾರಿಗಳಿಗೆ ಹೆಚ್ಚಿನ ಬಸ್ ಬಿಡಲು ಆಗ್ರಹಿಸಿದರು. ’ಶಾಲಾ-ಕಾಲೇಜು ಅವಧಿಯಲ್ಲಿ ರಾಮನಗರದಿಂದ ಪಟ್ಟಣಕ್ಕೆ ಇದ್ದ ಒಂದೇ ಬಸ್ಸಿನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯ ಇದೆ. ತರಗತಿಗಳು ತಪ್ಪದಿರಲೆಂದು ಲೋಂಡಾ ಗ್ರಾಮದ ವಿದ್ಯಾರ್ಥಿನಿಯರು ತುಂಬಿ ತುಳುಕುತ್ತಿದ್ದ ಬಸ್ಸಿನಲ್ಲಿ ಹತ್ತಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಗ್ಗೆ 7 ಮತ್ತು 8 ಗಂಟೆಗೆ ರಾಮನಗರ-ಖಾನಾಪುರ ಮತ್ತು ಮಧ್ಯಾಹ್ನ 2 ಮತ್ತು 3 ಗಂಟೆಗೆ ಖಾನಾಪುರ-ರಾಮನಗರ ನಡುವೆ ಹೆಚ್ಚುವರಿ ಬಸ್ಸುಗಳನ್ನು ಓಡಿಸಬೇಕು‘ ಎಂದು ಆಗ್ರಹಿಸಿದರು.</p>.<p>ಘಟನೆ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗೆ ಬಂದ ತಹಶೀಲ್ದಾರ್ ರೇಷ್ಮಾ ತಾಳಿಕೋಟಿ ಮತ್ತು ಖಾನಾಪುರ ಠಾಣೆಯ ಪಿ.ಎಸ್.ಐ ಬಸಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಕೂಡಲೇ ರಾಮನಗರ-ಖಾನಾಪುರ ರಸ್ತೆ ದುರಸ್ತಿಗೆ ಮತ್ತು ಈ ಮಾರ್ಗದಲ್ಲಿ ನಿಯಮಿತ ಬಸ್ ಸೇವೆ ಒದಗಿಸುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ (ಬೆಳಗಾವಿ ಜಿಲ್ಲೆ):</strong> ಉತ್ತರ ಕನ್ನಡ ಜಿಲ್ಲೆಯ ರಾಮನಗರದಿಂದ ತಾಲ್ಲೂಕಿನ ಲೋಂಡಾ, ಗುಂಜಿ ಮಾರ್ಗವಾಗಿ ಮಂಗಳವಾರ ಬೆಳಿಗ್ಗೆ ಪಟ್ಟಣಕ್ಕೆ ಬರುತ್ತಿದ್ದ ರಾಮನಗರ-ಬೆಳಗಾವಿ ಬಸ್ನಲ್ಲಿ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಸಿದ್ದರಿಂದ ಪ್ರಯಾಣಿಕರ ಮಧ್ಯೆ ಸಿಲುಕಿದ್ದ ಇಬ್ಬರು ವಿದ್ಯಾರ್ಥಿನಿಯರು ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದಾರೆ.</p>.<p>ಬಸ್ನಲ್ಲಿ ಲೋಂಡಾದಿಂದ ಪಟ್ಟಣದ ಕಾಲೇಜಿಗೆ ಹೊರಟಿದ್ದ 60-70 ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಹತ್ತಿದ್ದಾರೆ. ರಾಮನಗರ-ಖಾನಾಪುರ ಮಾರ್ಗದ ರಸ್ತೆ ದುಃಸ್ಥಿತಿಯಲ್ಲಿರುವ ಕಾರಣ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಧೂಳಿನ ಭಯದಿಂದಾಗಿ ಬಸ್ನ ಎಲ್ಲ ಕಿಟಕಿ-ಬಾಗಿಲುಗಳನ್ನು ಮುಚ್ಚಿದ್ದರು. ಬಸ್ ಗುಂಜಿ ಗ್ರಾಮದ ಬಳಿ ಬರುತ್ತಲೇ ಇಬ್ಬರು ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಬಸ್ ನಿರ್ವಾಹಕ ಮತ್ತು ಚಾಲಕ ಬಸ್ಅನ್ನು ನೇರವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದು ಅವರಿಗೆ ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಸುದ್ದಿ ತಿಳಿದು ಆಸ್ಪತ್ರೆಯ ಮುಂದೆ ವಿದ್ಯಾರ್ಥಿಗಳು, ಪಾಲಕರು ಮತ್ತು ಸ್ಥಳೀಯರು ಸೇರಿದ್ದರು. ಸ್ಥಳಕ್ಕಾಗಮಿಸಿದ ವಾಯವ್ಯ ಸಂಸ್ಥೆಯ ಅಧಿಕಾರಿಗಳಿಗೆ ಹೆಚ್ಚಿನ ಬಸ್ ಬಿಡಲು ಆಗ್ರಹಿಸಿದರು. ’ಶಾಲಾ-ಕಾಲೇಜು ಅವಧಿಯಲ್ಲಿ ರಾಮನಗರದಿಂದ ಪಟ್ಟಣಕ್ಕೆ ಇದ್ದ ಒಂದೇ ಬಸ್ಸಿನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯ ಇದೆ. ತರಗತಿಗಳು ತಪ್ಪದಿರಲೆಂದು ಲೋಂಡಾ ಗ್ರಾಮದ ವಿದ್ಯಾರ್ಥಿನಿಯರು ತುಂಬಿ ತುಳುಕುತ್ತಿದ್ದ ಬಸ್ಸಿನಲ್ಲಿ ಹತ್ತಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಗ್ಗೆ 7 ಮತ್ತು 8 ಗಂಟೆಗೆ ರಾಮನಗರ-ಖಾನಾಪುರ ಮತ್ತು ಮಧ್ಯಾಹ್ನ 2 ಮತ್ತು 3 ಗಂಟೆಗೆ ಖಾನಾಪುರ-ರಾಮನಗರ ನಡುವೆ ಹೆಚ್ಚುವರಿ ಬಸ್ಸುಗಳನ್ನು ಓಡಿಸಬೇಕು‘ ಎಂದು ಆಗ್ರಹಿಸಿದರು.</p>.<p>ಘಟನೆ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗೆ ಬಂದ ತಹಶೀಲ್ದಾರ್ ರೇಷ್ಮಾ ತಾಳಿಕೋಟಿ ಮತ್ತು ಖಾನಾಪುರ ಠಾಣೆಯ ಪಿ.ಎಸ್.ಐ ಬಸಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಕೂಡಲೇ ರಾಮನಗರ-ಖಾನಾಪುರ ರಸ್ತೆ ದುರಸ್ತಿಗೆ ಮತ್ತು ಈ ಮಾರ್ಗದಲ್ಲಿ ನಿಯಮಿತ ಬಸ್ ಸೇವೆ ಒದಗಿಸುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>