<p><strong>ಬೈಲಹೊಂಗಲ:</strong> ಸಮೀಪದ ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿ ಸಾವನ್ನಪ್ಪಿದ ತಾಲ್ಲೂಕಿನ ಅರವಳ್ಳಿ ಗ್ರಾಮದ ಬಡ ಕಾರ್ಮಿಕ ಮಂಜುನಾಥ ಕಾಜಗಾರ ಮನೆಗೆ ಶುಕ್ರವಾರ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಪಟ್ಟಣಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p>ಕಾರ್ಖಾನೆಯಿಂದ ₹ 15 ಲಕ್ಷ ಪರಿಹಾರ ಚೆಕ್ ವಿತರಿಸುವಾಗ ಮೃತ ಕಾರ್ಮಿಕನ ಕುಟುಂಬದವರು ನಿರಾಕರಿಸಿದ್ದಾರೆಂದು ತಿಳಿದು ಬಂದಿದೆ. ಇನಾಮದಾರ ಸಕ್ಕರೆ ಕಾರ್ಖಾನೆಯಿಂದ ಮೃತ 8 ಜನ ಕಾರ್ಮಿಕರಿಗೆ ತಲಾ ₹ 20 ಲಕ್ಷ ಪರಿಹಾರ ಘೋಷಿಸಿ ₹15 ಲಕ್ಷ. ಪರಿಹಾರ ಚೆಕ್ ನೀಡಲು ಮುಂದಾದಾಗ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಬಡ ಕಾರ್ಮಿಕರ ಜೀವಕ್ಕೆ ಬೆಲೆನೇ ಇಲ್ವಾ ಎಂದು ಪ್ರಶ್ನಿಸಿದ್ದಾರೆ.</p>.<p>ಶಾಸಕ ಮಹಾಂತೇಶ ಕೌಜಲಗಿ ಭೇಟಿ ನೀಡಿ, ಮೃತ ಕಾರ್ಮಿಕ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ವಿತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.</p>.<p>ಇನಾಮದಾರ ಸಕ್ಕರೆ ಕಾರ್ಖಾನೆಯವರು ಘೋಷಿಸಿರುವ ₹ 20 ಲಕ್ಷ ಪರಿಹಾರವನ್ನು ಮೃತ ಕಾರ್ಮಿಕರ ಕುಟುಂಬದವರಿಗೆ ನೀಡಬೇಕೆಂದು ಕಾರ್ಖಾನೆ ವ್ಯವಸ್ಥಾಪಕರಿಗೆ ಅವರು ತಿಳಿಸಿದರು.</p>.<p>ಮೃತ ಕಾರ್ಮಿಕನ ತಂದೆ ಮಡಿವಾಳಪ್ಪ ಕಾಜಗಾರ, ಚಿಕ್ಕಪ್ಪಂದಿರಾದ ಸುರೇಶ ಕಾಜಗಾರ, ಬಸವರಾಜ ಕಾಜಗಾರ, ಗ್ರಾಮದ ಮುಖಂಡ ಸಿದ್ದಪ್ಪ ಜಳಕದ ಸೇರಿದಂತೆ ಅನೇಕರು ಇದ್ದರು.</p>.<p><strong>₹ 20 ಲಕ್ಷ ಪರಿಹಾರ ನೀಡಲು ಬದ್ಧ:</strong></p>.<p>‘ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ನಡೆದ ದುರಂತದಲ್ಲಿ 8 ಜನ ಕಾರ್ಮಿಕರು ಸಾವನ್ನಪ್ಪಿರುವುದು ತುಂಬಾ ನೋವಿನ ಸಂಗತಿಯಾಗಿದೆ ಇದಕ್ಕೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ದುರಂತದಲ್ಲಿ ಮೃತ ಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ ₹ 20 ಲಕ್ಷ ಘೋಷಿಸಿದ ಪರಿಹಾರವನ್ನು ನೀಡಲು ನಾವು ಬದ್ಧ. ಈಗ ತಾತ್ಕಾಲಿಕವಾಗಿ ₹ 15 ಲಕ್ಷ ನೀಡಲಿದ್ದು, ಉಳಿದ ಬಾಕಿ ₹ 5 ಲಕ್ಷ ಪರಿಹಾರ ಹಣವನ್ನು ಶೀಘ್ರದಲ್ಲಿಯೇ ಅವರ ಕುಟುಂಬದವರಿಗೆ ತಲುಪಿಸಲಾಗುವುದು. ಮೃತ ಕಾರ್ಮಿಕರ ಕುಟುಂಬಸ್ಥರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಮೃತ ಕಾರ್ಮಿಕ ಕುಟುಂಬದ ಜೊತೆ ಕಾರ್ಖಾನೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ’ ಎಂದು ಕಾರ್ಖಾನೆ ವ್ಯವಸ್ಥಾಪಕ ರವೀಂದ್ರ ಪಟ್ಟಣಶೆಟ್ಟಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ಸಮೀಪದ ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿ ಸಾವನ್ನಪ್ಪಿದ ತಾಲ್ಲೂಕಿನ ಅರವಳ್ಳಿ ಗ್ರಾಮದ ಬಡ ಕಾರ್ಮಿಕ ಮಂಜುನಾಥ ಕಾಜಗಾರ ಮನೆಗೆ ಶುಕ್ರವಾರ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಪಟ್ಟಣಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p>ಕಾರ್ಖಾನೆಯಿಂದ ₹ 15 ಲಕ್ಷ ಪರಿಹಾರ ಚೆಕ್ ವಿತರಿಸುವಾಗ ಮೃತ ಕಾರ್ಮಿಕನ ಕುಟುಂಬದವರು ನಿರಾಕರಿಸಿದ್ದಾರೆಂದು ತಿಳಿದು ಬಂದಿದೆ. ಇನಾಮದಾರ ಸಕ್ಕರೆ ಕಾರ್ಖಾನೆಯಿಂದ ಮೃತ 8 ಜನ ಕಾರ್ಮಿಕರಿಗೆ ತಲಾ ₹ 20 ಲಕ್ಷ ಪರಿಹಾರ ಘೋಷಿಸಿ ₹15 ಲಕ್ಷ. ಪರಿಹಾರ ಚೆಕ್ ನೀಡಲು ಮುಂದಾದಾಗ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಬಡ ಕಾರ್ಮಿಕರ ಜೀವಕ್ಕೆ ಬೆಲೆನೇ ಇಲ್ವಾ ಎಂದು ಪ್ರಶ್ನಿಸಿದ್ದಾರೆ.</p>.<p>ಶಾಸಕ ಮಹಾಂತೇಶ ಕೌಜಲಗಿ ಭೇಟಿ ನೀಡಿ, ಮೃತ ಕಾರ್ಮಿಕ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ವಿತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.</p>.<p>ಇನಾಮದಾರ ಸಕ್ಕರೆ ಕಾರ್ಖಾನೆಯವರು ಘೋಷಿಸಿರುವ ₹ 20 ಲಕ್ಷ ಪರಿಹಾರವನ್ನು ಮೃತ ಕಾರ್ಮಿಕರ ಕುಟುಂಬದವರಿಗೆ ನೀಡಬೇಕೆಂದು ಕಾರ್ಖಾನೆ ವ್ಯವಸ್ಥಾಪಕರಿಗೆ ಅವರು ತಿಳಿಸಿದರು.</p>.<p>ಮೃತ ಕಾರ್ಮಿಕನ ತಂದೆ ಮಡಿವಾಳಪ್ಪ ಕಾಜಗಾರ, ಚಿಕ್ಕಪ್ಪಂದಿರಾದ ಸುರೇಶ ಕಾಜಗಾರ, ಬಸವರಾಜ ಕಾಜಗಾರ, ಗ್ರಾಮದ ಮುಖಂಡ ಸಿದ್ದಪ್ಪ ಜಳಕದ ಸೇರಿದಂತೆ ಅನೇಕರು ಇದ್ದರು.</p>.<p><strong>₹ 20 ಲಕ್ಷ ಪರಿಹಾರ ನೀಡಲು ಬದ್ಧ:</strong></p>.<p>‘ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ನಡೆದ ದುರಂತದಲ್ಲಿ 8 ಜನ ಕಾರ್ಮಿಕರು ಸಾವನ್ನಪ್ಪಿರುವುದು ತುಂಬಾ ನೋವಿನ ಸಂಗತಿಯಾಗಿದೆ ಇದಕ್ಕೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ದುರಂತದಲ್ಲಿ ಮೃತ ಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ ₹ 20 ಲಕ್ಷ ಘೋಷಿಸಿದ ಪರಿಹಾರವನ್ನು ನೀಡಲು ನಾವು ಬದ್ಧ. ಈಗ ತಾತ್ಕಾಲಿಕವಾಗಿ ₹ 15 ಲಕ್ಷ ನೀಡಲಿದ್ದು, ಉಳಿದ ಬಾಕಿ ₹ 5 ಲಕ್ಷ ಪರಿಹಾರ ಹಣವನ್ನು ಶೀಘ್ರದಲ್ಲಿಯೇ ಅವರ ಕುಟುಂಬದವರಿಗೆ ತಲುಪಿಸಲಾಗುವುದು. ಮೃತ ಕಾರ್ಮಿಕರ ಕುಟುಂಬಸ್ಥರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಮೃತ ಕಾರ್ಮಿಕ ಕುಟುಂಬದ ಜೊತೆ ಕಾರ್ಖಾನೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ’ ಎಂದು ಕಾರ್ಖಾನೆ ವ್ಯವಸ್ಥಾಪಕ ರವೀಂದ್ರ ಪಟ್ಟಣಶೆಟ್ಟಿ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>