<p><strong>ರಾಮದುರ್ಗ:</strong> ಖಾನಪೇಠೆಯ ಶ್ರೀಧನಲಕ್ಷ್ಮಿ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಗೆ ಮತದಾನ ಮಾಡಲು ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. </p>.<p>ಬಾದಾಮಿ ತಾಲ್ಲೂಕಿನ ಮನ್ನೇರಿ ಗ್ರಾಮದ ಬಸನಗೌಡ ಹನುಮಂತಗೌಡ ಅಯ್ಯನಗೌಡರ (65) ಮೃತಪಟ್ಟವರು.</p>.<p>ಪಟ್ಟಣದ ಈರಮ್ಮ ಯಾದವಾಡ ಪದವಿ ಕಾಲೇಜಿನಲ್ಲಿ ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. ಮತದಾನ ಮಾಡಲು ಸಾಲಿನಲ್ಲಿ ನಿಂತಾಗ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. </p>.<p>ಚುನಾವಣೆ ಹಿನ್ನೆಲೆಯಲ್ಲಿ ರಾಮದುರ್ಗ–ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿತ್ತು. </p>.<p>ಒಟ್ಟು 19,436 ಮತದಾರರನ್ನು ಹೊಂದಿದ್ದ ಕಾರ್ಖಾನೆಯ ಚುನಾವಣೆಯಲ್ಲಿ ಒಟ್ಟು 12,056 ಮತದಾರರು ಮತದಾನ ಮಾಡಿದ್ದಾರೆ. ಒಟ್ಟು ಶೇ 62ರಷ್ಟು ಮತದಾನವಾಗಿದೆ.</p>.<p>ಒಟ್ಟು 50 ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. 700 ಪೊಲೀಸ್ ಸಿಬ್ಬಂದಿ ಹಾಗೂ 250 ಚುನಾವಣೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಖಾನಪೇಠೆಯ ಶ್ರೀಧನಲಕ್ಷ್ಮಿ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಗೆ ಮತದಾನ ಮಾಡಲು ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. </p>.<p>ಬಾದಾಮಿ ತಾಲ್ಲೂಕಿನ ಮನ್ನೇರಿ ಗ್ರಾಮದ ಬಸನಗೌಡ ಹನುಮಂತಗೌಡ ಅಯ್ಯನಗೌಡರ (65) ಮೃತಪಟ್ಟವರು.</p>.<p>ಪಟ್ಟಣದ ಈರಮ್ಮ ಯಾದವಾಡ ಪದವಿ ಕಾಲೇಜಿನಲ್ಲಿ ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. ಮತದಾನ ಮಾಡಲು ಸಾಲಿನಲ್ಲಿ ನಿಂತಾಗ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. </p>.<p>ಚುನಾವಣೆ ಹಿನ್ನೆಲೆಯಲ್ಲಿ ರಾಮದುರ್ಗ–ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿತ್ತು. </p>.<p>ಒಟ್ಟು 19,436 ಮತದಾರರನ್ನು ಹೊಂದಿದ್ದ ಕಾರ್ಖಾನೆಯ ಚುನಾವಣೆಯಲ್ಲಿ ಒಟ್ಟು 12,056 ಮತದಾರರು ಮತದಾನ ಮಾಡಿದ್ದಾರೆ. ಒಟ್ಟು ಶೇ 62ರಷ್ಟು ಮತದಾನವಾಗಿದೆ.</p>.<p>ಒಟ್ಟು 50 ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. 700 ಪೊಲೀಸ್ ಸಿಬ್ಬಂದಿ ಹಾಗೂ 250 ಚುನಾವಣೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>