‘ಕಾರ್ಮಿಕರಿಗೆ ಕನಿಷ್ಠ ವೇತನದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಯ ಮಂಡಳಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಿಸುವ ಸಂಬಂಧ ದಕ್ಷಿಣ ಭಾರತದ ಸಕ್ಕರೆ ತಯಾರಕರ ಸಂಘ (ಕರ್ನಾಟಕ), ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಗಳ ಒಕ್ಕೂಟ ಮತ್ತು ಕರ್ನಾಟಕ ಸಕ್ಕರೆ ಕಾರ್ಮಿಕರ ಒಕ್ಕೂಟದ ನಡುವೆ ಒಪ್ಪಂದವಾಗಿದೆ. ಈ ಪ್ರಕಾರ ಕಾರ್ಮಿಕರ ವೇತನ ಪರಿಷ್ಕರಿಸಿ, ಮೂಲ ವೇತನದಲ್ಲಿ ಹೆಚ್ಚಳ ಮಾಡಲಾಗುವುದು’ ಎಂದು ತಿಳಿಸಿದರು.