ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

Last Updated 24 ಅಕ್ಟೋಬರ್ 2020, 9:40 IST
ಅಕ್ಷರ ಗಾತ್ರ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಹರ್ಷ ಶುಗರ್ಸ್‌ ಕಾರ್ಖಾನೆಯಲ್ಲಿ 2020 -21ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಸಂಬಯ್ಯನ ಮಠದ ಉಮೇಶ್ವರ ಸ್ವಾಮೀಜಿ (ಹೂಲಿ ಅಜ್ಜ) ಪೂಜೆ ನೆರವೇರಿಸಿ ಚಾಲನೆ ನೀಡಿದರು.

ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಕಾರ್ಖಾನೆಗೆ 2018-19ನೇ ಸಾಲಿನಿಂದ ನೀಡುತ್ತಿರುವ ಸಹಕಾರವನ್ನು ರೈತರ ಪ್ರಸಕ್ತ ಸಾಲಿನಲ್ಲೂ ಕೊಡಬೇಕು. ಕಬ್ಬು ಬೆಳೆಗಾರರಿಗೆ ಯೋಗ್ಯ ದರ ನೀಡುವಲ್ಲಿ ಕಾರ್ಖಾನೆ ಹಿಂದೆ ಮುಂದೆ ನೋಡುವುದಿಲ್ಲ’ ಎಂದರು.

ಕಳೆದ ಸಾಲಿನಲ್ಲಿ ಹೆಚ್ಚು ಕಬ್ಬು ಪೂರೈಸಿದ 6 ರೈತರನ್ನು ಸನ್ಮಾನಿಸಲಾಯಿತು. ನಿರ್ದೇಶಕ ಮೃಣಾಲ ಹೆಬ್ಬಾಳಕರ ಇದ್ದರು.

‘ಕಳೆದ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ₹ 100 ಹೆಚ್ಚುವರಿಯಾಗಿ ನೀಡಲಾಗುವುದು. ಇದರಿಂದಾಗಿ ಎಫ್ಆರ್‌ಪಿಗಿಂತ ₹ 172 ಹೆಚ್ಚುವರಿಯಾಗಿ ನೀಡಿದಂತಾಗಿದೆ. ಪ್ರಸ್ತುತ ಹಂಗಾಮಿಗೂ ರೈತರಿಗೆ ಯೋಗ್ಯವಾದ ದರ ನೀಡಲಾಗುವುದು’ ಎಂದು ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT