<p><strong>ಚನ್ನಮ್ಮನ ಕಿತ್ತೂರು:</strong> ಸಕ್ಕರೆ ಕಾರ್ಖಾನೆಗಳಿಗೆ ರೈತರು ಪೂರೈಕೆ ಮಾಡುವ ಮೆಟ್ರಿಕ್ ಟನ್ ಕಬ್ಬಿಗೆ ₹3,500 ಧಾರಣಿ ನಿಗದಿ ಪಡಿಸಬೇಕು, ತೂಕದಲ್ಲಾಗುತ್ತಿರುವ ಮೋಸ ತಡೆಯಬೇಕು, ಪೂರೈಕೆ ಮಾಡಿದ ಕಬ್ಬಿಗೆ ಹದಿನೈದು ದಿನದೊಳಗೆ ಬಿಲ್ ಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆಯು ಇಲ್ಲಿನ ಚನ್ನಮ್ಮ ವರ್ತುಲದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.</p>.<p>ಪ್ರತಿಭಟನೆ ಸಭೆಯಲ್ಲಿ ಸಂಘಟನೆ ಅಧ್ಯಕ್ಷ ಎಂ.ಎಫ್. ಜಕಾತಿ ಮಾತನಾಡಿ, ರೈತರ ಕಬ್ಬಿಗೆ ಬೆಲೆ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭ ಮಾಡಬೇಕು ಎಂದು ತಾಕೀತು ಮಾಡಿದರು.</p>.<p>ಮುಖಂಡ ಅಪ್ಪೇಶ ದಳವಾಯಿ ಮಾತನಾಡಿ, ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಯವರು ರೈತರಿಗೆ ಮೋಸ ಮಾಡುತ್ತಿದ್ದಾರೆಂದು ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿಯೇ ಮಾತನಾಡಿದ್ದಾರೆ. ಅದನ್ನು ತಡೆಯಲು ಸರ್ಕಾರದ ವತಿಯಿಂದ ಆಯಾ ಕಾರ್ಖಾನೆ ಆವರಣದಲ್ಲಿ ತೂಕದ ಯಂತ್ರ ಅಳವಡಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರವೀಣ ಸರದಾರ ಮಾತನಾಡಿ, ರೈತರು ಆರ್ಥಿಕವಾಗಿ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದನ್ನು ಮನಗಂಡಿರುವ ಕಾರ್ಖಾನೆ ಮಾಲೀಕರಿಗೆ ಬೆಲೆ ನಿಗದಿ ಮಾಡಿ ಕಬ್ಬು ನುರಿಸಬೇಕು ಎಂಬ ಆಲೋಚನೆ ಬರುತ್ತಿಲ್ಲ ಎಂದು ನುಡಿದರು.</p>.<p>ಮುಖಂಡರಾದ ಶಿವಾನಂದ ಹೊಳೆಹಡಗಲಿ, ವಿಜಯಕುಮಾರ ಶಿಂದೆ, ನಾಗರತ್ನ ಪಾಟೀಲ, ಶಿವನಸಿಂಗ್ ಮೊಕಾಶಿ, ಮಡಿವಾಳೆಪ್ಪ ವರಗಣ್ಣವರ, ರಾಚಯ್ಯ ತೊರಗಲ್ಮಠ, ಅಶೋಕ ಕುಗಟಿ, ಫಕ್ಕೀರಪ್ಪ ಜಾಂಗಟಿ, ಮಲ್ಲೇಶ ಮಾದಾರ, ಕಲ್ಲಪ್ಪ ಬುಡರಕಟ್ಟಿ, ಸುತ್ತಲಿನ ಹಳ್ಳಿಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಅನಂತರ ತಹಶೀಲ್ದಾರ್ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ಸಕ್ಕರೆ ಕಾರ್ಖಾನೆಗಳಿಗೆ ರೈತರು ಪೂರೈಕೆ ಮಾಡುವ ಮೆಟ್ರಿಕ್ ಟನ್ ಕಬ್ಬಿಗೆ ₹3,500 ಧಾರಣಿ ನಿಗದಿ ಪಡಿಸಬೇಕು, ತೂಕದಲ್ಲಾಗುತ್ತಿರುವ ಮೋಸ ತಡೆಯಬೇಕು, ಪೂರೈಕೆ ಮಾಡಿದ ಕಬ್ಬಿಗೆ ಹದಿನೈದು ದಿನದೊಳಗೆ ಬಿಲ್ ಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆಯು ಇಲ್ಲಿನ ಚನ್ನಮ್ಮ ವರ್ತುಲದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.</p>.<p>ಪ್ರತಿಭಟನೆ ಸಭೆಯಲ್ಲಿ ಸಂಘಟನೆ ಅಧ್ಯಕ್ಷ ಎಂ.ಎಫ್. ಜಕಾತಿ ಮಾತನಾಡಿ, ರೈತರ ಕಬ್ಬಿಗೆ ಬೆಲೆ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭ ಮಾಡಬೇಕು ಎಂದು ತಾಕೀತು ಮಾಡಿದರು.</p>.<p>ಮುಖಂಡ ಅಪ್ಪೇಶ ದಳವಾಯಿ ಮಾತನಾಡಿ, ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಯವರು ರೈತರಿಗೆ ಮೋಸ ಮಾಡುತ್ತಿದ್ದಾರೆಂದು ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿಯೇ ಮಾತನಾಡಿದ್ದಾರೆ. ಅದನ್ನು ತಡೆಯಲು ಸರ್ಕಾರದ ವತಿಯಿಂದ ಆಯಾ ಕಾರ್ಖಾನೆ ಆವರಣದಲ್ಲಿ ತೂಕದ ಯಂತ್ರ ಅಳವಡಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರವೀಣ ಸರದಾರ ಮಾತನಾಡಿ, ರೈತರು ಆರ್ಥಿಕವಾಗಿ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದನ್ನು ಮನಗಂಡಿರುವ ಕಾರ್ಖಾನೆ ಮಾಲೀಕರಿಗೆ ಬೆಲೆ ನಿಗದಿ ಮಾಡಿ ಕಬ್ಬು ನುರಿಸಬೇಕು ಎಂಬ ಆಲೋಚನೆ ಬರುತ್ತಿಲ್ಲ ಎಂದು ನುಡಿದರು.</p>.<p>ಮುಖಂಡರಾದ ಶಿವಾನಂದ ಹೊಳೆಹಡಗಲಿ, ವಿಜಯಕುಮಾರ ಶಿಂದೆ, ನಾಗರತ್ನ ಪಾಟೀಲ, ಶಿವನಸಿಂಗ್ ಮೊಕಾಶಿ, ಮಡಿವಾಳೆಪ್ಪ ವರಗಣ್ಣವರ, ರಾಚಯ್ಯ ತೊರಗಲ್ಮಠ, ಅಶೋಕ ಕುಗಟಿ, ಫಕ್ಕೀರಪ್ಪ ಜಾಂಗಟಿ, ಮಲ್ಲೇಶ ಮಾದಾರ, ಕಲ್ಲಪ್ಪ ಬುಡರಕಟ್ಟಿ, ಸುತ್ತಲಿನ ಹಳ್ಳಿಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಅನಂತರ ತಹಶೀಲ್ದಾರ್ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>