ಜಿಲ್ಲೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆ. ಒಟ್ಟು 25 ಸಕ್ಕರೆ ಕಾರ್ಖಾನೆಗಳಿವೆ. 1.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದ್ದು, ಈಗಾಗಲೇ ಹಲವೆಡೆ ಕಟಾವಿಗೆ ಬಂದಿದೆ. ಕೆಲವು ಕಾರ್ಖಾನೆಗಳಲ್ಲಿ ಬಾಯ್ಲರ್ ಪ್ರದೀಪನ ಕಾರ್ಯಕ್ರಮಗಳು ನಡೆದಿವೆ. ಅಲ್ಲದೇ, ಕಬ್ಬು ಕಟಾವು ಮಾಡುವುದು ಕೂಡ ಶುರುವಾಗಿದೆ. ಆದರೆ, ಟನ್ ಕಬ್ಬಿಗೆ ಕಾರ್ಖಾನೆಗಳು ಎಷ್ಟು ದರ ನೀಡಬೇಕು ಎನ್ನುವುದನ್ನು ರಾಜ್ಯ ಸರ್ಕಾರ ಇನ್ನೂ ನಿಗದಿಪಡಿಸಿಲ್ಲ. ‘ಒಳ್ಳೆಯ ದರ’ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ ಮತ್ತು ಕಬ್ಬನ್ನು ಕಾರ್ಖಾನೆಗಳಿಗೆ ಪೂರೈಸಲು ಮುಂದಾಗಿದ್ದಾರೆ.