<p><strong>ಚಿಕ್ಕೋಡಿ</strong>: ಪ್ರತಿ ಟನ್ ಕಬ್ಬಿಗೆ ₹3,500 ದರವನ್ನು ಸಕ್ಕರೆ ಕಾರ್ಖಾನೆಗಳು ನಿಗದಿ ಮಾಡಿ ಕಾರ್ಖಾನೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಸ್ವಾಭಿಮಾನಿ ಶೇತ್ಕರಿ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ನೆರೆಯ ಮಹಾರಾಷ್ಟ್ರದ ಕಡೆಗೆ ಭಾನುವಾರ ಬೆಳಿಗ್ಗೆ ತಾಲ್ಲೂಕು ವ್ಯಾಪ್ತಿಯ ವಿವಿಧ ಭಾಗಗಳಿಂದ ಕಬ್ಬು ತುಂಬಿದ ಟ್ರ್ಯಾಕ್ಟರ್ ಹೋಗುತ್ತಿರುವ ವಿಷಯ ತಿಳಿದ ರೈತ ಮುಖಂಡರು ಬಸವೇಶ್ವರ ವೃತ್ತದ ಬಳಿಯಲ್ಲಿ ಟ್ರ್ಯಾಕ್ಟರ್ ತಡೆದು ಪ್ರತಿಭಟನೆ ಪ್ರಾರಂಭಿಸಿದರು.</p>.<p>ಮಹಾರಾಷ್ಟ್ರದಲ್ಲಿ ಪ್ರತಿ ಟನ್ ಕಬ್ಬಿಗೆ ₹3,700 ದರ ಘೋಷಣೆ ಮಾಡುವಂತೆ ಅಲ್ಲಿನ ಸ್ವಾಭಿಮಾನಿ ಶೇತ್ಕರಿ ಸಂಘಟನೆಯು ಪ್ರತಿಭಟನೆ ಮಾಡುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವ ಬೇಡಿಕೆಯು ಇಲ್ಲಿನ ರೈತರದಾಗಿದೆ. ಮುಧೋಳ-ನಿಪ್ಪಾಣಿ ಹಾಗೂ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು ಸಂಧಿಸುವ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ರೈತರು ಪ್ರತಿಭಟನೆ ಮಾಡುತ್ತಿದ್ದರಿಂದ ವಾಹನ ಸವಾರರು ಪರದಾಡಿದರು.</p>.<p>ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸತ್ಯಪ್ಪ ವಲ್ಯಾಪೂರೆ, ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ನಿಪ್ಪಾಣಿ ತಾಲ್ಲೂಕು ಅಧ್ಯಕ್ಷ ರಮೇಶ ಪಾಟೀಲ, ರಾಜು ಖಿಚಡೆ, ಜೆಡಿಎಸ್ ಮುಖಂಡ ಕಾಡಗೌಡ ಪಾಟೀಲ ಮುಂತಾದವರು ಮಾತನಾಡಿದರು.</p>.<p>ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರು ರಸ್ತೆ ಮೇಲೆಯೇ ಅಡುಗೆ ಮಾಡಿ ಊಟ ಮಾಡಿ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.</p>.<p>ಪೊಲೀಸರು ಬಂದೋಬಸ್ತ್ ಮಾಡಿದ್ದರು. ಪಟ್ಟಣಕ್ಕೆ ಬರುವ ಬಸ್ ಹಾಗೂ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗದಲ್ಲಿ ತೆರಳುವ ವ್ಯವಸ್ಥೆ ಮಾಡಲಾಗಿದೆ.</p>.<p>ಮಾರುತಿ ದೊಡಮನಿ, ಆನಂದ ಪಾಶ್ಚಾಪೂರೆ, ಕುಮಾರ ವಿಜಯ ಪೂಜೇರಿ, ರಾಜೇಂದ್ರ ಪಾಶ್ಚಾಪೂರೆ, ಬಸವಣ್ಣಿ ಕವಣಿ, ಮನೋಜ ಮನಗೂಳಿ, ಶಂಕರ ಪಡೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಪ್ರತಿ ಟನ್ ಕಬ್ಬಿಗೆ ₹3,500 ದರವನ್ನು ಸಕ್ಕರೆ ಕಾರ್ಖಾನೆಗಳು ನಿಗದಿ ಮಾಡಿ ಕಾರ್ಖಾನೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಸ್ವಾಭಿಮಾನಿ ಶೇತ್ಕರಿ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ನೆರೆಯ ಮಹಾರಾಷ್ಟ್ರದ ಕಡೆಗೆ ಭಾನುವಾರ ಬೆಳಿಗ್ಗೆ ತಾಲ್ಲೂಕು ವ್ಯಾಪ್ತಿಯ ವಿವಿಧ ಭಾಗಗಳಿಂದ ಕಬ್ಬು ತುಂಬಿದ ಟ್ರ್ಯಾಕ್ಟರ್ ಹೋಗುತ್ತಿರುವ ವಿಷಯ ತಿಳಿದ ರೈತ ಮುಖಂಡರು ಬಸವೇಶ್ವರ ವೃತ್ತದ ಬಳಿಯಲ್ಲಿ ಟ್ರ್ಯಾಕ್ಟರ್ ತಡೆದು ಪ್ರತಿಭಟನೆ ಪ್ರಾರಂಭಿಸಿದರು.</p>.<p>ಮಹಾರಾಷ್ಟ್ರದಲ್ಲಿ ಪ್ರತಿ ಟನ್ ಕಬ್ಬಿಗೆ ₹3,700 ದರ ಘೋಷಣೆ ಮಾಡುವಂತೆ ಅಲ್ಲಿನ ಸ್ವಾಭಿಮಾನಿ ಶೇತ್ಕರಿ ಸಂಘಟನೆಯು ಪ್ರತಿಭಟನೆ ಮಾಡುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವ ಬೇಡಿಕೆಯು ಇಲ್ಲಿನ ರೈತರದಾಗಿದೆ. ಮುಧೋಳ-ನಿಪ್ಪಾಣಿ ಹಾಗೂ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು ಸಂಧಿಸುವ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ರೈತರು ಪ್ರತಿಭಟನೆ ಮಾಡುತ್ತಿದ್ದರಿಂದ ವಾಹನ ಸವಾರರು ಪರದಾಡಿದರು.</p>.<p>ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸತ್ಯಪ್ಪ ವಲ್ಯಾಪೂರೆ, ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ನಿಪ್ಪಾಣಿ ತಾಲ್ಲೂಕು ಅಧ್ಯಕ್ಷ ರಮೇಶ ಪಾಟೀಲ, ರಾಜು ಖಿಚಡೆ, ಜೆಡಿಎಸ್ ಮುಖಂಡ ಕಾಡಗೌಡ ಪಾಟೀಲ ಮುಂತಾದವರು ಮಾತನಾಡಿದರು.</p>.<p>ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರು ರಸ್ತೆ ಮೇಲೆಯೇ ಅಡುಗೆ ಮಾಡಿ ಊಟ ಮಾಡಿ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.</p>.<p>ಪೊಲೀಸರು ಬಂದೋಬಸ್ತ್ ಮಾಡಿದ್ದರು. ಪಟ್ಟಣಕ್ಕೆ ಬರುವ ಬಸ್ ಹಾಗೂ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗದಲ್ಲಿ ತೆರಳುವ ವ್ಯವಸ್ಥೆ ಮಾಡಲಾಗಿದೆ.</p>.<p>ಮಾರುತಿ ದೊಡಮನಿ, ಆನಂದ ಪಾಶ್ಚಾಪೂರೆ, ಕುಮಾರ ವಿಜಯ ಪೂಜೇರಿ, ರಾಜೇಂದ್ರ ಪಾಶ್ಚಾಪೂರೆ, ಬಸವಣ್ಣಿ ಕವಣಿ, ಮನೋಜ ಮನಗೂಳಿ, ಶಂಕರ ಪಡೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>