<p><strong>ಅಥಣಿ:</strong> ಪ್ರತಿ ಟನ್ ಕಬ್ಬಿಗೆ ₹3500 ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದ್ದು, ರೈತರು, ರೈತ ಮಹಿಳೆಯರು, ಕನ್ನಡಪರ ಹೋರಾಟಗಾರರು, ರಸ್ತೆಯಲ್ಲಿ ಉರುಳು ಸೇವೆ ನಡೆಸಿದರು.</p>.<p>ನಂತರ ಶಿವಯೋಗಿ ವೃತ್ತದಿಂದ ವೀರರಾಣಿ ಚನ್ನಮ್ಮ ವೃತ್ತದವರೆಗೆ ಅರೆ ಬೆತ್ತಲೆಯಾಗಿ ಕಬ್ಬಿನ ಹೊರೆ ಮತ್ತು ಜೋಳದ ರೊಟ್ಟಿ ಬುತ್ತಿ ತಲೆ ಮೇಲೆ ಹೊತ್ತುಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.<br><br>ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ಸಕ್ಕರೆ ದರ ಕಡಿಮೆ ಇದ್ದಾಗ ಹೆಚ್ಚಿನ ಬೆಲೆ ನೀಡಿರುವ ಕಾರ್ಖಾನೆಯ ಮಾಲೀಕರು ಈಗ ಸಕ್ಕರೆ ದರ ಹೆಚ್ಚಾಗಿದ್ದು ₹3500 ಕೊಡಬೇಕು’ ಎಂದರು.</p>.<p>ಕನ್ನಡಪರ ಹೋರಾಟಗಾರ ಅಣ್ಣಾಸಾಬ ತೆಲಸಂಗ ಮಾತನಾಡಿ, ‘ಸರ್ಕಾರ ಮೊoಡುತನ ಬಿಟ್ಟು, ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ತಿಳಿಸಿದರು.</p>.<p>ರೈತ ಮುಖಂಡರಾದ ರಾಮನಗೌಡ ಪಾಟೀಲ, ಜಗನ್ನಾಥ ಬಾಮನಿ, ಉದಯ ಮಾಕಾಣಿ, ಮುರಿಗೆಪ್ಪ ಹೊನವಾಡ, ಮಹಾದೇವ ಕುಚನೂರ, ಸಂಗಪ್ಪ ಕರಿಗಾರ, ಮಹದೇವ ಹೋನಮನೆ ಸೇರಿದಂತೆ ಅನೇಕ ರೈತ ಮುಖಂಡರು, ರೈತ ಮಹಿಳೆಯರು ಹೋರಾಟದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ಪ್ರತಿ ಟನ್ ಕಬ್ಬಿಗೆ ₹3500 ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದ್ದು, ರೈತರು, ರೈತ ಮಹಿಳೆಯರು, ಕನ್ನಡಪರ ಹೋರಾಟಗಾರರು, ರಸ್ತೆಯಲ್ಲಿ ಉರುಳು ಸೇವೆ ನಡೆಸಿದರು.</p>.<p>ನಂತರ ಶಿವಯೋಗಿ ವೃತ್ತದಿಂದ ವೀರರಾಣಿ ಚನ್ನಮ್ಮ ವೃತ್ತದವರೆಗೆ ಅರೆ ಬೆತ್ತಲೆಯಾಗಿ ಕಬ್ಬಿನ ಹೊರೆ ಮತ್ತು ಜೋಳದ ರೊಟ್ಟಿ ಬುತ್ತಿ ತಲೆ ಮೇಲೆ ಹೊತ್ತುಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.<br><br>ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ಸಕ್ಕರೆ ದರ ಕಡಿಮೆ ಇದ್ದಾಗ ಹೆಚ್ಚಿನ ಬೆಲೆ ನೀಡಿರುವ ಕಾರ್ಖಾನೆಯ ಮಾಲೀಕರು ಈಗ ಸಕ್ಕರೆ ದರ ಹೆಚ್ಚಾಗಿದ್ದು ₹3500 ಕೊಡಬೇಕು’ ಎಂದರು.</p>.<p>ಕನ್ನಡಪರ ಹೋರಾಟಗಾರ ಅಣ್ಣಾಸಾಬ ತೆಲಸಂಗ ಮಾತನಾಡಿ, ‘ಸರ್ಕಾರ ಮೊoಡುತನ ಬಿಟ್ಟು, ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ತಿಳಿಸಿದರು.</p>.<p>ರೈತ ಮುಖಂಡರಾದ ರಾಮನಗೌಡ ಪಾಟೀಲ, ಜಗನ್ನಾಥ ಬಾಮನಿ, ಉದಯ ಮಾಕಾಣಿ, ಮುರಿಗೆಪ್ಪ ಹೊನವಾಡ, ಮಹಾದೇವ ಕುಚನೂರ, ಸಂಗಪ್ಪ ಕರಿಗಾರ, ಮಹದೇವ ಹೋನಮನೆ ಸೇರಿದಂತೆ ಅನೇಕ ರೈತ ಮುಖಂಡರು, ರೈತ ಮಹಿಳೆಯರು ಹೋರಾಟದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>