<p>ಬೆಳಗಾವಿ: ‘ಭತ್ತದ ಬೆಳೆಯ ನಡುವೆ ಅಜೋಲಾ ಬೆಳೆಯುವುದರಿಂದ ಹಲವು ಲಾಭಗಳಿವೆ’ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಕೋಳೆಕರ ತಿಳಿಸಿದರು.</p>.<p>ತಾಲ್ಲೂಕಿನ ಕಡೋಲಿ, ಬಾದರವಾಡಿ, ಖಾದರವಾಡಿ ಹಾಗೂ ಮಜಗಾಂವ ಗ್ರಾಮಗಳಲ್ಲಿ ‘ಆತ್ಮ’ ಯೋಜನೆಯಡಿ ರೈತರ ಗದ್ದೆಗಳಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಅಜೋಲಾ ಹಸಿರೆಲೆ ಗೊಬ್ಬರವಾಗಿ ಉಪಯೋಗವಾಗುತ್ತದೆ ಹಾಗೂ ಜಾನುವಾರುಗಳಿಗೆ ಒಳ್ಳೆಯ ಪೌಷ್ಟಿಕ ಆಹಾರವಾಗಿ ಉಪಯೋಗಿಸಬಹುದು. ಭತ್ತದ ಬೆಳೆಯಲ್ಲಿ ಅಜೋಲಾ ಬಳಕೆ ಒಂದು ಉತ್ತಮ ಬೇಸಾಯ ಪದ್ಧತಿಯಾಗಿದೆ. ಈ ತಾಂತ್ರಿಕತೆಯನ್ನು ರೈತರಲ್ಲಿ ಜನಪ್ರಿಯಗೊಳಿಸಲಾಗುತ್ತಿದೆ. ಪ್ರಾತ್ಯಕ್ಷಿಕೆಗಳನ್ನು<br />ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ಪ್ರಾತ್ಯಕ್ಷಿಕೆಯ ಯಶಸ್ಸು ಆಧರಿಸಿ, ಮುಂದಿನ ದಿನಗಳಲ್ಲಿ ತಾಲ್ಲೂಕಿನ ಮತ್ತಷ್ಟು ಗ್ರಾಮಗಳಿಗೆ ವಿಸ್ತರಿಸಲಾಗುವುದು’ ಎಂದು ಸಹಾಯಕ ನಿರ್ದೇಶಕ ಆರ್.ಬಿ. ನಾಯ್ಕರ ತಿಳಿಸಿದರು.</p>.<p>ಉಚಗಾಂವ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರುಣ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಎಸ್.ಟಿ. ಕಾಂಬಳೆ, ಆತ್ಮ ಯೋಜನೆಯ ಉಪಯೋಜನಾ ಅಧಿಕಾರಿ ಮಠದ, ರಾಜಶೇಖರ, ಮಂಜುನಾಥ ಹಕ್ಕಲದವರ, ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಭತ್ತದ ಬೆಳೆಯ ನಡುವೆ ಅಜೋಲಾ ಬೆಳೆಯುವುದರಿಂದ ಹಲವು ಲಾಭಗಳಿವೆ’ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಕೋಳೆಕರ ತಿಳಿಸಿದರು.</p>.<p>ತಾಲ್ಲೂಕಿನ ಕಡೋಲಿ, ಬಾದರವಾಡಿ, ಖಾದರವಾಡಿ ಹಾಗೂ ಮಜಗಾಂವ ಗ್ರಾಮಗಳಲ್ಲಿ ‘ಆತ್ಮ’ ಯೋಜನೆಯಡಿ ರೈತರ ಗದ್ದೆಗಳಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಅಜೋಲಾ ಹಸಿರೆಲೆ ಗೊಬ್ಬರವಾಗಿ ಉಪಯೋಗವಾಗುತ್ತದೆ ಹಾಗೂ ಜಾನುವಾರುಗಳಿಗೆ ಒಳ್ಳೆಯ ಪೌಷ್ಟಿಕ ಆಹಾರವಾಗಿ ಉಪಯೋಗಿಸಬಹುದು. ಭತ್ತದ ಬೆಳೆಯಲ್ಲಿ ಅಜೋಲಾ ಬಳಕೆ ಒಂದು ಉತ್ತಮ ಬೇಸಾಯ ಪದ್ಧತಿಯಾಗಿದೆ. ಈ ತಾಂತ್ರಿಕತೆಯನ್ನು ರೈತರಲ್ಲಿ ಜನಪ್ರಿಯಗೊಳಿಸಲಾಗುತ್ತಿದೆ. ಪ್ರಾತ್ಯಕ್ಷಿಕೆಗಳನ್ನು<br />ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ಪ್ರಾತ್ಯಕ್ಷಿಕೆಯ ಯಶಸ್ಸು ಆಧರಿಸಿ, ಮುಂದಿನ ದಿನಗಳಲ್ಲಿ ತಾಲ್ಲೂಕಿನ ಮತ್ತಷ್ಟು ಗ್ರಾಮಗಳಿಗೆ ವಿಸ್ತರಿಸಲಾಗುವುದು’ ಎಂದು ಸಹಾಯಕ ನಿರ್ದೇಶಕ ಆರ್.ಬಿ. ನಾಯ್ಕರ ತಿಳಿಸಿದರು.</p>.<p>ಉಚಗಾಂವ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರುಣ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಎಸ್.ಟಿ. ಕಾಂಬಳೆ, ಆತ್ಮ ಯೋಜನೆಯ ಉಪಯೋಜನಾ ಅಧಿಕಾರಿ ಮಠದ, ರಾಜಶೇಖರ, ಮಂಜುನಾಥ ಹಕ್ಕಲದವರ, ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>