ಬೆಳಗಾವಿ: ‘ಜಿಲ್ಲೆಯಲ್ಲಿ ಈ ತಿಂಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಇದರಿಂದಾಗಿ ಸವದತ್ತಿ ತಾಲ್ಲೂಕಿನ ಹೂಲಿ ಮತ್ತು ಕರೀಕಟ್ಟಿ ಗ್ರಾಮಗಳ ಕೃಷಿ ಜಮೀನಿನಲ್ಲಿ ನೀರು ಬಸಿದು ಹೋಗದೆ ಇರುವುದರಿಂದ ಗೋವಿನ ಜೋಳ, ಸಜ್ಜೆ, ಹತ್ತಿ, ಸೂರ್ಯಕಾಂತಿ, ಶೇಂಗಾ ಜಮೀನುಗಳಲ್ಲಿ ತೇವಾಂಶ ಹೆಚ್ಚಳದಿಂದ ಬೆಳೆಗಳು ಕುಂಠಿತವಾಗುವ ಸಂಭವವಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.