‘ವಿಮಾ ಸಂಸ್ಥೆಯು ನಷ್ಟ ನಿರ್ಧರಿಸಿ ಇತ್ಯರ್ಥಪಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಲ್ಲಿ ಅವಕಾಶವಿದೆ. ಅಧಿಸೂಚಿತ ಬೆಳೆಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ, ವಿಮೆ ಮಾಡಿಸಿರುವ ರೈತರು ನೇರವಾಗಿ ಸಂಬಂಧಿಸಿದ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಅಥವಾ ಹಣಕಾಸು ಸಂಸ್ಥೆ (ಬ್ಯಾಂಕ್) ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಸೂಚನೆ ನೀಡಬೇಕು. ವಿಮೆ ಮಾಡಿಸಿದ ಬೆಳೆಯ ವಿವರ, ಹಾನಿಯ ವ್ಯಾಪ್ತಿ ಹಾಗೂ ಕಾರಣಗಳನ್ನು 72 ಗಂಟೆಗಳೊಳಗೆ ತಿಳಿಸಬೇಕು’ ಎಂದರು.