<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಉತ್ತಮ ಸಂವಹನ ಕೌಶಲ ಅಳವಡಿಸಿಕೊಂಡರೆ ಜಗತ್ತಿನ ಯಾವುದೇ ಭಾಗದಲ್ಲಿ ಉದ್ಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಬಹುದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಹೇಳಿದರು.</p>.<p>ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ಇಂಗ್ಲಿಷ್ ವಿಭಾಗದಿಂದ ‘ಜಾಗತಿಕ ಸ್ಪರ್ಧೆಗಾಗಿ ಸಂವಹನ ಕೌಶಲಗಳು’ ವಿಷಯದ ಕುರಿತು ಶನಿವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಕೌಶಲ ಆಧಾರಿತ ಶಿಕ್ಷಣ ಪಡೆಯಬೇಕು. ಪಠ್ಯದ ಹೊರತಾದ ಹಾಗೂ ಔದ್ಯೋಗಿಕ ಜಗತ್ತಿಗೆ ಬೇಕಾಗುವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಅನೇಕರು ಪದವೀಧರರಾಗಿದ್ದರೂ ಸಾಮಾನ್ಯ ರೈಲ್ವೆ ಗ್ಯಾಂಗ್ಮನ್ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಕೌಶಲ ಬೆಳೆಸಿಕೊಂಡಿದ್ದರೆ ಒಳ್ಳೆಯ ನೌಕರಿಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದರು’ ಎಂದರು.</p>.<p>‘ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ರೂಪಿಸುವ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದಲ್ಲಿ ವಿದೇಶಿ ಭಾಷಾ ಅಧ್ಯಯನ ವಿಭಾಗಗಳನ್ನು ತೆರೆಯಲಾಗುವುದು. ಒಂದೆರಡಾದರೂ ವಿದೇಶಿ ಭಾಷೆಗಳ ವಿಭಾಗಗಳನ್ನು ಆರಂಬಿಸಲಾಗುವುದು’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಎಂ. ಜಯಪ್ಪ ಮಾತನಾಡಿ, ‘ಭಾರತವು ಇಂಗ್ಲಿಷ್ ಬಳಸುವ 2ನೇ ಅತಿ ದೊಡ್ಡ ರಾಷ್ಟ್ರವಾಗಿದೆ. ಆರ್.ಕೆ. ನಾರಾಯಣ ಅವರು ಇಂಗ್ಲಿಷ್ ವಿದೇಶಿ ಭಾಷೆಯಲ್ಲ; ಅದು ನಮ್ಮ ಸ್ಥಳೀಯ ಭಾಷೆ ಎಂದು ತಿಳಿದುಕೊಳ್ಳುವಂತೆ ಹೇಳಿದ್ದರು. ಅವರ ಮಾತು ಸಾಕಾರವಾಗುವ ಕಾಲ ಸಮೀಪಿಸಿದೆ. ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಭಾಷಾ ಕೌಶಲಗಳನ್ನು ರೂಢಿಸಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಪ್ರೊ.ಎಂ.ಬಿ. ಹೆಗ್ಗನ್ನವರ, ಆರ್ಸಿಯು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಶ್ರೀನಿವಾಸ ಗೌಡ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ.ಎಂ.ಬಿ. ಸಂಗಾಪೂರ ಅವರನ್ನು ಸತ್ಕರಿಸಲಾಯಿತು.</p>.<p>ಸಹಾಯಕ ಪ್ರಾಧ್ಯಾಪಕಿ ಪೂಜಾ ಹಲ್ಯಾಳ, ಸಂಪನ್ಮೂಲ ವ್ಯಕ್ತಿ ಡಾ.ಶಾಂತಿ ವರದರಾಜನ್ ಮಾತನಾಡಿದರು.</p>.<p>ಉಪ ಪ್ರಾಚಾರ್ಯ ಅನಿಲ್ ರಾಮದುರ್ಗ, ಕಾರ್ಯಾಗಾರದ ಸಂಚಾಲಕ ಡಾ.ಎಂ.ಎನ್. ರಮೇಶ, ಜಗದೀಶ ಗಸ್ತಿ ಇದ್ದರು.</p>.<p>ಡಾ.ಕನಕಪ್ಪ ಪೂಜಾರ ಪರಿಚಯಿಸಿದರು. ಡಾ.ಕವಿತಾ ಕುಸಗಲ್ಲ ಸ್ವಾಗತಿಸಿದರು. ಡಾ. ಜ್ಯೋತಿ ಬಿರಾದರ ನಿರೂಪಿಸಿದರು. ಸುರೇಶ ಗಂಗೋತ್ರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಉತ್ತಮ ಸಂವಹನ ಕೌಶಲ ಅಳವಡಿಸಿಕೊಂಡರೆ ಜಗತ್ತಿನ ಯಾವುದೇ ಭಾಗದಲ್ಲಿ ಉದ್ಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಬಹುದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಹೇಳಿದರು.</p>.<p>ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ಇಂಗ್ಲಿಷ್ ವಿಭಾಗದಿಂದ ‘ಜಾಗತಿಕ ಸ್ಪರ್ಧೆಗಾಗಿ ಸಂವಹನ ಕೌಶಲಗಳು’ ವಿಷಯದ ಕುರಿತು ಶನಿವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಕೌಶಲ ಆಧಾರಿತ ಶಿಕ್ಷಣ ಪಡೆಯಬೇಕು. ಪಠ್ಯದ ಹೊರತಾದ ಹಾಗೂ ಔದ್ಯೋಗಿಕ ಜಗತ್ತಿಗೆ ಬೇಕಾಗುವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಅನೇಕರು ಪದವೀಧರರಾಗಿದ್ದರೂ ಸಾಮಾನ್ಯ ರೈಲ್ವೆ ಗ್ಯಾಂಗ್ಮನ್ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಕೌಶಲ ಬೆಳೆಸಿಕೊಂಡಿದ್ದರೆ ಒಳ್ಳೆಯ ನೌಕರಿಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದರು’ ಎಂದರು.</p>.<p>‘ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ರೂಪಿಸುವ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದಲ್ಲಿ ವಿದೇಶಿ ಭಾಷಾ ಅಧ್ಯಯನ ವಿಭಾಗಗಳನ್ನು ತೆರೆಯಲಾಗುವುದು. ಒಂದೆರಡಾದರೂ ವಿದೇಶಿ ಭಾಷೆಗಳ ವಿಭಾಗಗಳನ್ನು ಆರಂಬಿಸಲಾಗುವುದು’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಎಂ. ಜಯಪ್ಪ ಮಾತನಾಡಿ, ‘ಭಾರತವು ಇಂಗ್ಲಿಷ್ ಬಳಸುವ 2ನೇ ಅತಿ ದೊಡ್ಡ ರಾಷ್ಟ್ರವಾಗಿದೆ. ಆರ್.ಕೆ. ನಾರಾಯಣ ಅವರು ಇಂಗ್ಲಿಷ್ ವಿದೇಶಿ ಭಾಷೆಯಲ್ಲ; ಅದು ನಮ್ಮ ಸ್ಥಳೀಯ ಭಾಷೆ ಎಂದು ತಿಳಿದುಕೊಳ್ಳುವಂತೆ ಹೇಳಿದ್ದರು. ಅವರ ಮಾತು ಸಾಕಾರವಾಗುವ ಕಾಲ ಸಮೀಪಿಸಿದೆ. ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಭಾಷಾ ಕೌಶಲಗಳನ್ನು ರೂಢಿಸಬೇಕಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಪ್ರೊ.ಎಂ.ಬಿ. ಹೆಗ್ಗನ್ನವರ, ಆರ್ಸಿಯು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಶ್ರೀನಿವಾಸ ಗೌಡ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ.ಎಂ.ಬಿ. ಸಂಗಾಪೂರ ಅವರನ್ನು ಸತ್ಕರಿಸಲಾಯಿತು.</p>.<p>ಸಹಾಯಕ ಪ್ರಾಧ್ಯಾಪಕಿ ಪೂಜಾ ಹಲ್ಯಾಳ, ಸಂಪನ್ಮೂಲ ವ್ಯಕ್ತಿ ಡಾ.ಶಾಂತಿ ವರದರಾಜನ್ ಮಾತನಾಡಿದರು.</p>.<p>ಉಪ ಪ್ರಾಚಾರ್ಯ ಅನಿಲ್ ರಾಮದುರ್ಗ, ಕಾರ್ಯಾಗಾರದ ಸಂಚಾಲಕ ಡಾ.ಎಂ.ಎನ್. ರಮೇಶ, ಜಗದೀಶ ಗಸ್ತಿ ಇದ್ದರು.</p>.<p>ಡಾ.ಕನಕಪ್ಪ ಪೂಜಾರ ಪರಿಚಯಿಸಿದರು. ಡಾ.ಕವಿತಾ ಕುಸಗಲ್ಲ ಸ್ವಾಗತಿಸಿದರು. ಡಾ. ಜ್ಯೋತಿ ಬಿರಾದರ ನಿರೂಪಿಸಿದರು. ಸುರೇಶ ಗಂಗೋತ್ರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>