<p><strong>ಬೆಳಗಾವಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನ ಬಳಕೆ ಅತ್ಯವಶ್ಯವಾಗಿದೆ. ಆ ಮೂಲಕ ಯಶಸ್ಸು ಗಳಿಸಬಹುದಾಗಿದೆ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು.</p>.<p>ನಗರ ಕೇಂದ್ರ ಗ್ರಂಥಾಲಯದಲ್ಲಿ ಈಚೆಗೆ ನಡೆದ ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.</p>.<p>‘ಸಾರ್ವಜನಿಕ ಡಿಜಿಟಲ್ ಗ್ರಂಥಾಲಯಕ್ಕೆ ಜಿಲ್ಲೆಯ 13,400 ಮಂದಿ ಸೇರಿ6 ಲಕ್ಷಕ್ಕೂ ಅಧಿಕ ಓದುಗರು ನೋಂದಾಯಿಸಿದ್ದಾರೆ. ಈ ಡಿಜಿಟಲ್ ವೇದಿಕೆಯನ್ನು ವೆಬ್ ಹಾಗೂ ಆ್ಯಪ್ ಆಧಾರಿತವಾಗಿ ಬಳಸಿಕೊಳ್ಳಬಹುದಾಗಿದೆ. ವೆಬ್ನಲ್ಲಿ ಲಭ್ಯವಿರುವ ಎಲ್ಲ ವಿಷಯಗಳು ಆ್ಯಪ್ನಲ್ಲೂ ಲಭ್ಯವಾಗುತ್ತವೆ. ಬಳಕೆದಾರರು ತಮ್ಮ ಮೊಬೈಲ್ ಫೋನ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಶಾಲಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೇಶದ ಮತ್ತು ಅಂತರರಾಷ್ಟ್ರೀಯ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಈ ಡಿಜಿಟಲ್ ಗ್ರಂಥಾಲಯದಲ್ಲಿ ಅಳವಡಿಸಲಾಗಿದೆ’ ಎಂದರು.</p>.<p>ನಿವೃತ್ತ ಉಪ ನಿರ್ದೇಶಕ ಡಿ.ಎ. ಕುಲಕರ್ಣಿ ಇದ್ದರು. ಸ್ಥಳದಲ್ಲೇ ಡಿಜಿಟಲ್ ಗ್ರಂಥಾಲಯಕ್ಕೆ ನೋಂದಣಿ ಮಾಡಿಸಿದವರನ್ನು ಸನ್ಮಾನಿಸಲಾಯಿತು.</p>.<p>ಉಪ ನಿರ್ದೇಶಕ ರಾಮಯ್ಯ ಮಾತನಾಡಿದರು. ಎ.ಎ. ಕಾಂಬಳೆ ಸ್ವಾಗತಿಸಿದರು. ಇ.ಎನ್. ಅಂಬೇಕರ ನಿರೂಪಿಸಿದರು. ನೀಲಮ್ಮ ಆರ್. ಪಟ್ಟೇದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನ ಬಳಕೆ ಅತ್ಯವಶ್ಯವಾಗಿದೆ. ಆ ಮೂಲಕ ಯಶಸ್ಸು ಗಳಿಸಬಹುದಾಗಿದೆ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು.</p>.<p>ನಗರ ಕೇಂದ್ರ ಗ್ರಂಥಾಲಯದಲ್ಲಿ ಈಚೆಗೆ ನಡೆದ ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.</p>.<p>‘ಸಾರ್ವಜನಿಕ ಡಿಜಿಟಲ್ ಗ್ರಂಥಾಲಯಕ್ಕೆ ಜಿಲ್ಲೆಯ 13,400 ಮಂದಿ ಸೇರಿ6 ಲಕ್ಷಕ್ಕೂ ಅಧಿಕ ಓದುಗರು ನೋಂದಾಯಿಸಿದ್ದಾರೆ. ಈ ಡಿಜಿಟಲ್ ವೇದಿಕೆಯನ್ನು ವೆಬ್ ಹಾಗೂ ಆ್ಯಪ್ ಆಧಾರಿತವಾಗಿ ಬಳಸಿಕೊಳ್ಳಬಹುದಾಗಿದೆ. ವೆಬ್ನಲ್ಲಿ ಲಭ್ಯವಿರುವ ಎಲ್ಲ ವಿಷಯಗಳು ಆ್ಯಪ್ನಲ್ಲೂ ಲಭ್ಯವಾಗುತ್ತವೆ. ಬಳಕೆದಾರರು ತಮ್ಮ ಮೊಬೈಲ್ ಫೋನ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಶಾಲಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೇಶದ ಮತ್ತು ಅಂತರರಾಷ್ಟ್ರೀಯ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಈ ಡಿಜಿಟಲ್ ಗ್ರಂಥಾಲಯದಲ್ಲಿ ಅಳವಡಿಸಲಾಗಿದೆ’ ಎಂದರು.</p>.<p>ನಿವೃತ್ತ ಉಪ ನಿರ್ದೇಶಕ ಡಿ.ಎ. ಕುಲಕರ್ಣಿ ಇದ್ದರು. ಸ್ಥಳದಲ್ಲೇ ಡಿಜಿಟಲ್ ಗ್ರಂಥಾಲಯಕ್ಕೆ ನೋಂದಣಿ ಮಾಡಿಸಿದವರನ್ನು ಸನ್ಮಾನಿಸಲಾಯಿತು.</p>.<p>ಉಪ ನಿರ್ದೇಶಕ ರಾಮಯ್ಯ ಮಾತನಾಡಿದರು. ಎ.ಎ. ಕಾಂಬಳೆ ಸ್ವಾಗತಿಸಿದರು. ಇ.ಎನ್. ಅಂಬೇಕರ ನಿರೂಪಿಸಿದರು. ನೀಲಮ್ಮ ಆರ್. ಪಟ್ಟೇದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>