ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಗುರುವಾರ ಆರಂಭವಾಯಿತು.
ಜಿಲ್ಲಾ ಪಂಚಾಯ್ತಿ ಸಿಇಒ ಕೆ.ವಿ. ರಾಜೇಂದ್ರ ಉದ್ಘಾಟಿಸಿದರು. ‘ಗ್ರಾಮೀಣ ಕ್ರೀಡೆ ಹಾಗೂ ಜನಪದ ಕಲೆಯನ್ನು ಉಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಶಿಬಿರದಲ್ಲಿ ಹಲವು ಚಟುವಟಿಕೆಗಳನ್ನು ನಡೆಸಲಾಗುವುದು’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೇವತಿ ಎಸ್. ಹೊಸಮಠ, ನಗರ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಮಲಾ ಎಂ. ಬಸರಗಿ ಇದ್ದರು.
ಹಿರಿಯ ಸಹಾಯಕ ನಿರ್ದೇಶಕ ಅರುಣ ಮ. ನೀರಗಟ್ಟಿ ನಿರೂಪಿಸಿದರು.