<p><strong>ಬೆಳಗಾವಿ</strong>: ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಾಚರಣೆ ಅಂಗವಾಗಿ ಮೇ 14ರಂದು ಬೆಳಿಗ್ಗೆ 8.30ರಿಂದ ಸಂಜೆ 4.30ರವರೆಗೆ ಮಧುಮೇಹಪೀಡಿತ ಮಕ್ಕಳಿಗೆ 22ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ ಆಯೋಜಿಸಿದೆ.</p>.<p>ಸಂಸದೆ ಮಂಗಲಾ ಸುರೇಶ ಅಂಗಡಿ ಉದ್ಘಾಟಿಸಲಿದ್ದಾರೆ. ಡಾ.ವಿ.ಡಿ. ಪಾಟೀಲ, ಡಾ.ಎನ್.ಎಸ್. ಮಹಾಂತಶೆಟ್ಟಿ, ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೊಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಪಾಸಣೆ, ಆಟ, ಚಿತ್ರಕಲೆ, ಪೇಂಟಿಂಟ್ ಸ್ಫರ್ಧೆ ಮೊದಲಾದ ಚಟುವಟಿಕೆಗಳು ನಡೆಯಲಿವೆ. ಅತ್ಯುತ್ತಮ ಬಾಲಕಿ ಮತ್ತು ಬಾಲಕನಿಗೆ ಹಾಗೂ ತಾಯಿಗೆ ಪದಕ ನೀಡಿ ಗೌರವಿಸಲಾಗುವುದು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ ನೇತೃತ್ವದಲ್ಲಿ ಡಾ.ಸುಜಾತಾ ಜಾಲಿ, ಡಾ.ಜ್ಯೋತಿ ವಸೆದಾರ ನಡೆಸಿಕೊಡಲಿದ್ದಾರೆ. ಡಾ.ದೀಪಶ್ರೀ ಅಂಟಿನ ಮಕ್ಕಳ ಕಣ್ಣು ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9844073591 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಾಚರಣೆ ಅಂಗವಾಗಿ ಮೇ 14ರಂದು ಬೆಳಿಗ್ಗೆ 8.30ರಿಂದ ಸಂಜೆ 4.30ರವರೆಗೆ ಮಧುಮೇಹಪೀಡಿತ ಮಕ್ಕಳಿಗೆ 22ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ ಆಯೋಜಿಸಿದೆ.</p>.<p>ಸಂಸದೆ ಮಂಗಲಾ ಸುರೇಶ ಅಂಗಡಿ ಉದ್ಘಾಟಿಸಲಿದ್ದಾರೆ. ಡಾ.ವಿ.ಡಿ. ಪಾಟೀಲ, ಡಾ.ಎನ್.ಎಸ್. ಮಹಾಂತಶೆಟ್ಟಿ, ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೊಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಪಾಸಣೆ, ಆಟ, ಚಿತ್ರಕಲೆ, ಪೇಂಟಿಂಟ್ ಸ್ಫರ್ಧೆ ಮೊದಲಾದ ಚಟುವಟಿಕೆಗಳು ನಡೆಯಲಿವೆ. ಅತ್ಯುತ್ತಮ ಬಾಲಕಿ ಮತ್ತು ಬಾಲಕನಿಗೆ ಹಾಗೂ ತಾಯಿಗೆ ಪದಕ ನೀಡಿ ಗೌರವಿಸಲಾಗುವುದು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ ನೇತೃತ್ವದಲ್ಲಿ ಡಾ.ಸುಜಾತಾ ಜಾಲಿ, ಡಾ.ಜ್ಯೋತಿ ವಸೆದಾರ ನಡೆಸಿಕೊಡಲಿದ್ದಾರೆ. ಡಾ.ದೀಪಶ್ರೀ ಅಂಟಿನ ಮಕ್ಕಳ ಕಣ್ಣು ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9844073591 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>