ಗುರುವಾರ ನಗರಪಾಲಿಕೆ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಮಳೆಯಿಂದಾಗಿ ಉಂಟಾಗುವ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪರಿಣಾಮಕಾರಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಚರಂಡಿ, ನಾಲಾಗಳನ್ನು ಸ್ವಚ್ಛಗೊಳಿಸಬೇಕು. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ತುರ್ತಾಗಿ ಸ್ಪಂದಿಸಬೇಕು’ ಎಂದು ಹೇಳಿದರು.