‘ವಿದ್ಯುತ್ ವ್ಯತ್ಯಯ, ಸಿಬ್ಬಂದಿ ಕೊರತೆ, ಪಂಪಿಂಗ್ ಸಮಸ್ಯೆ ಮೊದಲಾದ ನೆಪಗಳನ್ನು ಹೇಳುವಂತಿಲ್ಲ. ಜಲಾಶಯಗಳಲ್ಲಿ ನೀರು ಲಭ್ಯವಿದ್ದರೂ ಪೂರೈಕೆಗೆ ಕ್ರಮ ವಹಿಸದಿದ್ದರೆ ಯಾರು ಹೊಣೆ? ಜನರು ಜನಪ್ರತಿನಿಧಿಗಳಾದ ನಮ್ಮನ್ನು ಪ್ರಶ್ನಿಸುತ್ತಾರೆ. ಹೆಸ್ಕಾಂ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮತ್ತು ಎಲ್ ಅಂಡ್ ಟಿ ಕಂಪನಿಯವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನರಿಗೆ ನೀರು ಒದಗಿಸುವುದು ನಿಮ್ಮೆಲ್ಲರ ಆದ್ಯತೆಯಾಗಬೇಕು. ಮುಂದೆ ಲೋಪದೋಷಗಳು ಕಂಡುಬಂದಲ್ಲಿ ಶಿಸ್ತುಕ್ರಮಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.